'ಅಯೋಧ್ಯಾ ಕುರಿತ ಸುಪ್ರೀಂ ತೀರ್ಪು ಕಪ್ಪುಚುಕ್ಕೆ: ಮೇಲ್ಮನವಿ ಸಲ್ಲಿಸಲ್ಲ'
ನವದೆಹಲಿ, ನವೆಂಬರ್ 22: ದೇಶದ ಇತಿಹಾಸದಲ್ಲಿ ಅಯೋಧ್ಯೆ ರಾಮಜನ್ಮಭೂಮಿ ತೀರ್ಪು ಕಪ್ಪುಚುಕ್ಕೆಯಾಗಿರಲಿದೆ, ಆದರೆ ಕೋರ್ಟ್ ಆದೇಶ ಪ್ರಶ್ನಿಸಿ ಮರುಪರಿಶೀಲನಾ ಅಥವಾ ಮೇಲ್ಮನವಿ ಅರ್ಜಿ ಸಲ್ಲಿಸುವುದಿಲ್ಲ ಎಂದು ಜಮಾಯತ್ ಉಲಾಮಾ ಈ ಹಿಂದ್ ಸಂಘಟನೆ ಮುಖ್ಯಸ್ಥ ಮೌಲಾನಾ ಮೊಹಮ್ಮದ್ ಮದಾನಿ ತಿಳಿಸಿದ್ದಾರೆ.
ಕೋರ್ಟ್ ಆದೇಶ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿರುವ ಬೆನ್ನಲ್ಲೇ ಈ ಸಂಘಟನೆಯಿಂದ ಈ ಹೇಳಿಕೆ ಹೊರಬಿದ್ದಿದೆ.
ಗುರುವಾರ ನಡೆದ ಸಂಘಟನೆಯ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋರ್ಟ್ ಆದೇಶ ಏಕಮುಖವಾಗಿದೆ. ದೇವಸ್ಥಾನದ ಮೇಲೆ ಮಸೀದಿ ಕಟ್ಟಿಲ್ಲ ಎಂದು ಹೇಳಿದ್ದರೂ, ನೂರಾರು ವರ್ಷ ಇತಿಹಾಸವಿರುವ ಮಸೀದಿ ಹಾಗೂ ಅಲ್ಲಿ ಪ್ರಾರ್ಥಿಸುವವರ ನಂಬಿಕೆಯನ್ನು ಪರಿಗಣಿಸಲಾಗಿಲ್ಲ.

ಆದಾಗ್ಯೂ ಮರುಪರಿಶೀಲನಾ ಅರ್ಜಿ ಸಲ್ಲಿಸುವುದರಿಂದ ವಿವಾದ ಬೆಳೆಯುತ್ತಿದೆಯೇ ಹೊರತು ಯಾವುದೇ ಪ್ರಯೋಜನವಿಲ್ಲ. ಈ ರೀತಿಯ ಋಣಾತ್ಮಕ ಹೆಜ್ಜೆಗಳಿಂದ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತದೆ.
ಹೀಗಾಗಿ ಮರುಪರಿಶೀಲನಾ ಅರ್ಜಿ ಬದಲಿಗೆ ಅಯೋಧ್ಯಾದಲ್ಲಿ ನಿರ್ಮಾಣವಾಗಿರುವ ಸಾಕಷ್ಟು ಮಸೀದಿಗಳು ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರದಲ್ಲಿದೆ. ಇಲ್ಲಿ ಪ್ರಾರ್ಥನೆಗೆ ಮುಸ್ಲಿಮರಿಗೆ ಅವಕಾಶ ನೀಡಬೇಕು ಎಂದು ಮೌಲಾನಾ ಆಗ್ರಹಿಸಿದ್ದಾರೆ.
ಇತ್ತೀಚೆಗೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು ಸಭೆ ಸೇರಿ ಸುಪ್ರೀಂಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಹೀಗಾಗಿ ಮುಸ್ಲಿಮರ ಧಾರ್ಮಿಕ ನಂಬಿಕೆಗಳ ರಕ್ಷಣೆ ಹಾಗೂ ಶರಿಯತ್ ರಕ್ಷಣೆಗಾಗಿ ಮೇಲ್ಮನವಿ ಅರ್ಜಿ ಸಲ್ಲಿಕೆ ಅನಿವಾರ್ಯ ಎಂದು ವೈಯಕ್ತಿಕ ಕಾನೂನು ಮಂಡಳಿ ಅಭಿಪ್ರಾಯ ಪಟ್ಟಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications