ದೆಹಲಿಯ ಸಂಸತ್ ಭವನದ ಎದುರು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಬಂಧನ
ನವದೆಹಲಿ, ಆಗಸ್ಟ್ 26: ದೆಹಲಿಯ ಸಂಸತ್ ಭವನದ ಎದುರು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ.
ಆತ ಜಮ್ಮು-ಕಾಶ್ಮೀರದ ವ್ಯಕ್ತಿ ಎಂದು ತಿಳಿದುಬಂದಿದೆ. ದೆಹಲಿಯ ವಿಜಯ್ ಚೌಕ್ ಬಳಿ ಆತನನ್ನು ಬಂಧಿಸಲಾಗಿದೆ. ಆತನ ಬಳಿ ಎರಡು ಗುರುತಿನ ಚೀಟಿಗಳಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು; ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸದಸ್ಯನ ಬಂಧನ
ಎರಡೂ ಐಡಿಗಳಲ್ಲಿ ಬೇರೆ ಬೇರೆ ಹೆಸರಿದ್ದು, ತನ್ನ ಹೇಳಿಕೆಯನ್ನು ಪದೇ ಪದೇ ಬದಲಾಯಿಸುತ್ತಿದರುವುದು ಮತ್ತಷ್ಟು ಅನುಮಾನಕ್ಕೀಡು ಮಾಡಿದೆ. ದೆಹಲಿ ಪೊಲೀಸರಿಗೆ ಈತನನ್ನು ಹಸ್ತಾಂತರಿಸಲಾಗಿದೆ.
ವರದಿಗಳ ಪ್ರಕಾರ ಬಂಧಿತ ವ್ಯಕ್ತಿ ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯವನಾಗಿದ್ದಾನೆ. ಸಂಸತ್ ಭವನದ ಎದುರು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಕರ್ತವ್ಯ ನಿರತ ಸಿಆರ್ ಪಿಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಪ್ರಾಥಮಿಕ ವಿಚಾರಣೆ ವೇಳೆ ಪೊಲೀಸರಿಗೆ ಈ ವ್ಯಕ್ತಿ ತನ್ನ ಬಗ್ಗೆ ದಾರಿ ತಪ್ಪಿಸುವ ಮಾಹಿತಿ ನೀಡಿದ್ದಾನೆ. ಆತನಿಂದ ವಶಪಡಿಸಿಕೊಂಡ ವಸ್ತುಗಳ ಪೈಕಿ ಕೋಡ್ ವರ್ಡ್ ಗಳನ್ನು ಹೊಂದಿದ ಮಾಹಿತಿಯೊಂದು ಲಭ್ಯವಾಗಿದೆ.
ಬಂಧಿತ ವ್ಯಕ್ತಿಯಿಂದ ಎರಡು ಐಡಿ ಕಾರ್ಡ್ ಗಳು- ಒಂದು ಆಧಾರ್ ಕಾರ್ಡ್ ಹಾಗೂ ವಾಹನ ಚಾಲನೆ ಪರವಾನಗಿಯನ್ನೂ ವಶಪಡಿಸಿಕೊಳ್ಳಲಾಗಿದೆ.
ಸೆಪ್ಟೆಂಬರ್ 14ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ, ಅಕ್ಟೋಬರ್ 1ರವರೆಗೆ ಇರಲಿದೆ, ಶನಿವಾರ ಭಾನುವಾರ ಕೂಡ ರಜೆ ಇರುವುದಿಲ್ಲ, ದಿನಕ್ಕೆ 4 ಗಂಟೆಗಳು ಮಾತ್ರ ಕಲಾಪ ನಡೆಯಲಿದ.