ಕೇಂದ್ರಾಡಳಿತ ಪ್ರದೇಶ ಪಾಂಡಿಚೆರಿ ಮಾದರಿಯಲ್ಲಿ ಜಮ್ಮು ಕಾಶ್ಮೀರದ ಆಡಳಿತ?
ನವದೆಹಲಿ, ಆಗಸ್ಟ್ 05: ಜಮ್ಮು ಕಾಶ್ಮೀರ ಮತ್ತು ಲಡಾಕ್ ಅನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ಕೇಂದ್ರ ಸರ್ಕಾರವು ಇಂದು ವಿಭಜನೆ ಮಾಡಿದೆ. ಈ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಒಪ್ಪಿಗೆಯೂ ದೊರೆತಿದೆ.
ಸರ್ಕಾರವು ಮಂಡಿಸಿರುವ ವಿಧೇಯಕದ ಪ್ರಕಾರ, ಜಮ್ಮು ಕಾಶ್ಮೀರವು ಶಾಸಕಾಂಗ ಹೊಂದಿದ ಕೇಂದ್ರಾಡಳಿತ ಪ್ರದೇಶವಾಗಿ ಇರಲಿದೆ. ಆದರೆ ಲಡಾಕ್ ಶಾಸಕಾಂಗ ಇರದ ಕೇಂದ್ರಾಡಳಿತ ಪ್ರದೇಶ ಆಗಲಿದೆ.
ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೆರಿಯಲ್ಲಿ ಅನುಸರಿಸಲಾಗುತ್ತಿರುವ ಮಾದರಿಯನ್ನೇ ಜಮ್ಮು ಕಾಶ್ಮೀರಕ್ಕೆ ಅನ್ವಯಿಸಲಾಗುತ್ತದೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳಿಂದ ಹೇಳಿವೆ.
ಜಮ್ಮು ಕಾಶ್ಮೀರಕ್ಕೆ ದೇಶದ ಇತರ ರಾಜ್ಯಗಳಂತೆಯೇ ವಿಧಾನಸಭೆ ಇರುತ್ತದೆ, ಅದಕ್ಕಾಗಿ ಚುನಾವಣೆಯೂ ನಡೆಯುತ್ತದೆ, ಸರ್ಕಾರವೂ ರಚನೆ ಆಗುತ್ತದೆ. ಆದರೆ ಜಮ್ಮು ಕಾಶ್ಮೀರವು ಲೆಫ್ಟಿನೆಂಟ್ ಗೌರ್ನರ್ ಒಬ್ಬರ ಮೇಲ್ವಿಚಾರಣೆಯಲ್ಲಿರುತ್ತದೆ. ಆ ಗೌರ್ನರ್ ಅನ್ನು ಕೇಂದ್ರ ಸರ್ಕಾರ ನೇಮಿಸುತ್ತದೆ.

ದೆಹಲಿ ಪೊಲೀಸರು ಕೇಂದ್ರದ ಹಿಡಿತದಲ್ಲಿದ್ದಾರೆ
ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ ಈಗ ಇದೇ ಪರಿಸ್ಥಿತಿ ಇದೆ. ಸರ್ಕಾರ ಇದೆಯಾದರೂ ಅದು ಗೌರ್ನರ್ ಮೇಲ್ವಿಚಾರಣೆಯಲ್ಲಿ ಕಾರ್ಯ ನಿರ್ವಹಿಸಬೇಕಿದೆ. ಪೊಲೀಸ್ ಸಹ ಕೇಂದ್ರದ ಅಧೀನದಲ್ಲಿದೆ. ಆದರೆ ಪಾಂಡಿಚೆರಿಯಲ್ಲಿ ಸ್ಥಳೀಯ ಪೊಲೀಸರು ಸರ್ಕಾರದ ಅಧೀನದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ಮಾದರಿಯನ್ನು ಜಮ್ಮು ಕಾಶ್ಮೀರದಲ್ಲಿಯೂ ತರಲಾಗುತ್ತದೆ.

ಇತರ ರಾಜ್ಯಗಳಂತೆ ಎಲ್ಲವೂ ಇರಲಿದೆ
ಜಮ್ಮು ಕಾಶ್ಮೀರದಲ್ಲಿ ಇತರ ರಾಜ್ಯಗಳಂತೆಯೇ ಶಾಸಕರು, ಸಂಸದರು, ರಾಜ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ ಎಲ್ಲರೂ ಇರುತ್ತಾರೆ ಆದರೆ ಸರ್ಕಾರದ ಮೇಲೆ ಲೆಫ್ಟಿನೆಂಟ್ ಗೌರ್ನರ್ ಒಬ್ಬರು ಇರುತ್ತಾರೆ.

ಜಮ್ಮು ಕಾಶ್ಮೀರದಲ್ಲಿ ಹೈಕೋರ್ಟ್ ಕಾರ್ಯನಿರ್ವಹಿಸುತ್ತದೆಯೇ?
ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೆರಿಯಲ್ಲಿ ಹೈಕೋರ್ಟ್ ಇಲ್ಲ, ಅಲ್ಲಿನ ಎಲ್ಲ ಪ್ರಕರಣಗಳು ಮದ್ರಾಸ್ ಹೈಕೋರ್ಟ್ನಲ್ಲಿ ವಿಚಾರಣೆಗೆ ಒಳಪಡುತ್ತವೆ. ಆದರೆ ಜಮ್ಮು ಕಾಶ್ಮೀರದಲ್ಲಿ ಹೈಕೋರ್ಟ್ ಇದೆ. ಇಂದಿನ ನಂತರ ಅಲ್ಲಿ ಹೈಕೋರ್ಟ್ ಕಾರ್ಯನಿರ್ವಹಿಸುತ್ತದೆಯೋ ಇಲ್ಲವೋ, ಅಥವಾ ಜಮ್ಮು ಕಾಶ್ಮೀರದ ಪ್ರಕರಣಗಳು ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆಗೆ ಒಪಡುತ್ತವೆಯೋ ನೋಡಬೇಕಿದೆ.

ಮೂರು ಕೇಂದ್ರಾಡಳಿತ ಪ್ರದೇಶಕ್ಕೆ ವಿಧಾನಸಭೆ ಇದೆ
ಜಮ್ಮು ಕಾಶ್ಮೀರವನ್ನೂ ಸೇರಿ ದೇಶದಲ್ಲಿ ಪ್ರಸ್ತುತ ಒಂಬತ್ತು ಕೇಂದ್ರಾಡಳಿತ ಪ್ರದೇಶಗಳಿವೆ. ಅದರಲ್ಲಿ ಜಮ್ಮು ಕಾಶ್ಮೀರ, ದೆಹಲಿ, ಪಾಂಡಿಚೆರಿ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರವೇ ವಿಧಾನಸಭೆ ಇದೆ. ಉಳಿದ ಆರು ಕೇಂದ್ರಾಡಳಿತ ಪ್ರದೇಶಗಳು ನೇರವಾಗಿ ಕೇಂದ್ರಸರ್ಕಾರದಿಂದಲೇ ಆಳ್ವಿಕೆಗೆ ಒಳಪಟ್ಟಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications