ಮೋದಿ ಸರ್ಕಾರ ವಿರುದ್ಧ ಸಿಡಿದೆದ್ದ ಜನತಾ ಪರಿವಾರ
ನವದೆಹಲಿ, ಡಿ.22: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವೈಫಲ್ಯಗಳು, ಪೊಳ್ಳು ಭರವಸೆಗಳನ್ನು ಮುಂದಿಟ್ಟುಕೊಂಡು ನ್ಯಾಯಕ್ಕಾಗಿ ಆಗ್ರಹಿಸಿ ಜನತಾ ಪರಿವಾರ ಜಂತರ್ ಮಂತರ್ ಬಳಿ ಸೋಮವಾರ ಬೃಹತ್ ಪ್ರತಿಭಟನೆ ಆರಂಭಿಸಿದೆ.
ವಿದೇಶದಲ್ಲಿರುವ ಕಪ್ಪು ಹಣವನ್ನು ತರಲು ವಿಫಲವಾಗಿದೆ ಎಂದು ಆರೋಪಿಸಿ 6 ಜನತಾ ಪರಿವಾರದ ಪ್ರಮುಖ ಪಕ್ಷಗಳು ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದವು.
ಜನತಾ ಪರಿವಾರದ ಅಂಗ ಪಕ್ಷಗಳಾದ ಜೆಡಿಯು, ಜೆಡಿಎಸ್ , ಆರ್ಜೆಡಿ, ರಾಷ್ಟ್ರೀಯ ಲೋಕ ದಳ, ಸಮಾಜವಾದಿಪಕ್ಷ, ಎಸ್ಜೆಪಿ ಸೇರಿದಂತೆ ಒಟ್ಟು 6 ಪಕ್ಷಗಳು ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.
Dharam ke naam par khilwad bandh karo,PM ji aapne vaada kiya tha ki aap 100din mei kala dhan laogey: Azam Khan at Jantar Mantar
— ANI (@ANI_news) December 22, 2014 ಕಳೆದ ಲೋಕಸಭೆ ಚುನಾವಣೆ, ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಜನತಾ ಪರಿವಾರದೊಡನೆ ಗುರುತಿಸಿಕೊಂಡಿರುವ ಪ್ರಾದೇಶಿಕ ಪಕ್ಷಗಳು ಉತ್ತಮ ಸ್ಥಿತಿಯಲ್ಲಿಲ್ಲ. ಹೀಗಾಗಿ ಪ್ರಾದೇಶಿಕ ಪಕ್ಷಗಳನ್ನು ವಿಲೀನಗೊಳಿಸಿ ಮತ್ತೊಮ್ಮೆ ತೃತೀಯರಂಗ ಸ್ಥಾಪನೆ ಮಾಡುವ ಪ್ರಕ್ರಿಯೆ ಡಿ.5ರಂದು ಚಾಲನೆ ನೀಡಲಾಗಿತ್ತು. [ಜನತಾ ಪರಿವಾರ ಉದಯ]
ಟಿಎಂಸಿ ಬೆಂಬಲ: ಜನತಾ ಪರಿವಾರದ ಹೋರಾಟಕ್ಕೆ ಟಿಎಂಸಿ ಕೂಡ ಬೆಂಬಲ ಸೂಚಿಸಿರುವುದು ವಿಶೇಷವಾಗಿದೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್, ಲಾಲೂ ಪ್ರಸಾದ್ ಯಾದವ್, ನಿತಿಶ್ ಕುಮಾರ್, ಜೆಡಿಯು ಮುಖಂಡ ಶರದ್ ಯಾದವ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನ ದೇಶದ ಜನತೆಗೆ ಮೋದಿ ನೀಡಿದ್ದ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಕೇವಲ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಪ್ರತಿಭಟನಾ ನಿರತರು ದೂರಿದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಒಂದೇ ಒಂದು ಭರವಸೆಯನ್ನು ಕೂಡ ಈಡೇರಿಸಿಲ್ಲ.
ಬೆಂಗಳೂರಿನಲ್ಲಿ ಹಿಂದೂ ಸಂಘಟನೆಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Bengaluru : Congress protest against VHP,RSS,BJP over conversion issue pic.twitter.com/AoynU7MVYt
— ANI (@ANI_news) December 22, 2014 ಮತಾಂತರದ ಬಗ್ಗೆ ಗೊಂದಲ: ಧರ್ಮ ಮತ್ತು ಜಾತಿಗಳ ನಡುವೆ ಕಂದಕ ಸೃಷ್ಟಿಸಿದ್ದು, ಕೋಮುವಾದ ಎಲ್ಲೆಡೆ ಹಬ್ಬುತ್ತಿದೆ ಎಂದು ಆರೋಪಿಸಿದರು. ದೇಶದಲ್ಲಿ ಮತಾಂತರಕ್ಕೆ ಕೇಂದ್ರ ಸರ್ಕಾರವೇ ನೇರ ಕುಮ್ಮಕ್ಕು ನೀಡುತ್ತದೆ. ಸಂಘ ಪರಿವಾರದ ವಿಎಚ್ಪಿ, ಆರ್ಎಸ್ಎಸ್, ಭಜರಂಗದಳ ಸೇರಿದಂತೆ ಮತ್ತಿತರ ಸಂಘಟನೆಗಳು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆಯಾಗಿದ್ದು, ಪ್ರಧಾನಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ ಏಕೆ ಎಂದು ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ದೇಶದಲ್ಲಿ ಇಂದು ಕೋಮುವಾದ ತಾಂಡವವಾಡುತ್ತಿದೆ. ಎಲ್ಲಾ ಸಮಾನ ಪಕ್ಷಗಳು ಇದರ ವಿರುದ್ಧ ಒಗ್ಗೂಡಬೇಕು. ಇಲ್ಲದಿದ್ದರೆ ದೇಶಕ್ಕೆ ಗಂಡಾಂತರ ಬರಲಿದೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದ ಜನತೆಗೆ ಮೋದಿ ನೀಡಿದ್ದ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಕೇವಲ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಜನತಾ ಪರಿವಾರದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications