ಜೆಟ್ ಏರ್ವೇಸ್ ಗೆ ಮತ್ತೆ ಆಘಾತ: ಮುಖ್ಯ ಹಣಕಾಸು ಅಧಿಕಾರಿ ರಾಜೀನಾಮೆ
ನವದೆಹಲಿ, ಮೇ 14: ಒಂದರ ಮೇಲೊಂದು ಆಘಾತ ಎದುರಿಸುತ್ತಿರುವ ಜೆಟ್ ಏರ್ವೇಸ್ ಗೆ ಇದೀಗ ಮತ್ತೊಂದು ಕಹಿ ಸನ್ನಿವೇಶ ಎದುರಾಗಿದೆ. ಜೆಟ್ ಏರ್ವೇಸ್ ನ ಮುಖ್ಯ ಹಣಕಾಸು ಅಧಿಕಾರಿ ಮತ್ತು ಡೆಪ್ಯುಟಿ ಸಿಇಒ ಅಮಿತ್ ಅಗರ್ವಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2015 ರಿಂದಲೂ ಜೆಟ್ ಏರ್ವೇಸ್ ನ ಮುಖ್ಯ ಹಣಕಾಸು ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮಿತ್ ಅಗರ್ವಾಲ್, ಸೋಮವಾರವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. 'ವೈಯಕ್ತಿಕ ಕಾರಣಗಳಿಂದ ನಾನು ಸಂಸ್ಥೆಗೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಅಗರ್ವಾಲ್ ಹೇಳಿದ್ದಾರೆ.
ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ಜೆಟ್ ಏರ್ವೇಸ್ ನ ಷೇರುಗಳೂ ಮಕಾಡೆ ಮಲಗಿದ್ದು, ಸಿಬ್ಬಂದಿಗೆ ವೇತನ ನೀಡುವುದಕ್ಕೂ ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಭಾರತದಲ್ಲಿ ಅತೀ ದೀರ್ಘಕಾಲ ವಿಮಾನಯಾನ ಸೇವೆ ಸಲ್ಲಿಸಿದ ಕೀರ್ತಿಯನ್ನು ಪಡೆದಿದ್ದ ಜೆಟ್ ಏರ್ವೇಸ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿತ್ತು. ಇತ್ತೀಚೆಗೆ ಶೇ. 75 ರಷ್ಟು ಜೆಟ್ ಏರ್ವೇಸ್ ಷೇರುಗಳನ್ನು ಮಾರಾಟಕ್ಕಿಟ್ಟರೂ, ಕೊಳ್ಳಲು ಯಾರೂ ಆಸಕ್ತಿ ತೋರದಿರುವುದು ಸಂಸ್ಥೆಗೆ ಸಾಕಷ್ಟು ನೋವುಂಟು ಮಾಡಿತ್ತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications