ಜೆಎನ್ ಯು ರೇಪ್ ಕೇಸ್: ವಿದ್ಯಾರ್ಥಿ ಮುಖಂಡ ಅಂದರ್
ನವದೆಹಲಿ, ಆಗಸ್ಟ್ 25: ಜವಹಾರಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯೊಬ್ಬಳ ಮೇಲೆ ಅತ್ಯಾಚಾರ ಎಸೆಗಿದ ಘಟನೆ ಬುಧವಾರ ವರದಿಯಾಗಿತ್ತು. ಆರೋಪ ಹೊತ್ತ ವಿದ್ಯಾರ್ಥಿ ಸಂಘಟನೆ ಮುಖಂಡ ಅನ್ಮೋಲ್ ರತನ್ ಅವರು ಬುಧವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾನೆ.
ಜೆಎನ್ ಯುಯಲ್ಲಿ ವ್ಯಾಸಂಗ ಮಾಡುತ್ತಿರುವ 28 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಅನ್ಮೋಲ್ ಹೊತ್ತುಕೊಂಡಿದ್ದಾರೆ. ಅತ್ಯಾಚಾರ ಎಸಗಿದ ಮೇಲೆ ಆಕೆಗೆ 13 ಬಾರಿ ಕರೆ ಮಾಡಿ, ವಿಷಯ ಮುಚ್ಚಿ ಹಾಕುವಂತೆ ಕೇಳಿಕೊಂಡಿದ್ದಾನೆ. ಆದರೆ, ವಿಷಯ ಪೊಲೀಸರ ಕಿವಿಗೆ ಬಿದ್ದಿದೆ.

ಪೊಲೀಸರ ಮುಂದಿನ ಕ್ರಮ ಜರುಗಿಸುವುದಕ್ಕೂ ಮುನ್ನ ಅನ್ಮೋಲ್ ಬುಧವಾರ ರಾತ್ರಿ 10.15 ರ ವೇಳೆಗೆ ದಕ್ಷಿಣ ದೆಹಲಿಯಲ್ಲಿರುವ ವಸಂತ್ ಕುಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಸಂತ್ರಸ್ತ ವಿದ್ಯಾರ್ಥಿನಿಯ ಜತೆ ಗೆಳೆತನ ಹೊಂದಿದ್ದ ಅನ್ಮೋಲ್, ಆಕೆಯ ಹಾಸ್ಟೆಲ್ ರೂಮಿಗೆ ತೆರಳಿ ಆಕೆಗೆ ಬೇಕಾಗಿದ್ದ ಸಿನಿಮಾವೊಂದನ್ನು ನೀಡಿದ್ದಾನೆ. ನಂತರ ಮತ್ತು ಬರಿಸುವ ಪಾನೀಯ ನೀಡಿ ಆಕೆ ಮೇಲೆ ರೇಪ್ ಮಾಡಿದ್ದಾನೆ.
ಅತ್ಯಾಚಾರ ಆರೋಪ ಹೊತ್ತ ಮೇಲೆ ಅನ್ಮೋಲ್ ನನ್ನು ಆಲ್ ಇಂಡಿಯಾ ಸ್ಟುಡೆಂಟ್ಸ್ ಅಸೋಸಿಯೇಷನ್ (ಎಐಎಸ್ ಎ) ನಿಂದ ಹೊರ ಹಾಕಲಾಗಿದೆ. ಅನ್ಮೋಲ್ ವಿರುದ್ಧ ಐಪಿಎಸ್ ಸೆಕ್ಷನ್ 376 ಹಾಗೂ 506 ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. (ಐಎಎನ್ಎಸ್)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications