"ಜೆಎನ್ ಯು ಹಿಂಸಾಚಾರದ ಹಿಂದೆ ಎಡಪಂಥೀಯ ವಿದ್ಯಾರ್ಥಿಗಳ ಕೈವಾಡ"
ನವದೆಹಲಿ, ಜನವರಿ.10: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹಿಂದೆ ಎಡಪಂಥೀಯ ವಿದ್ಯಾರ್ಥಿಗಳ ಕೈವಾಡವಿರುವ ಶಂಕೆಯಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆರೋಪಿಸಿದ್ದಾರೆ.
ಇಂದು ದೆಹಲಿ ಪೊಲೀಸರು ಬಿಡುಗಡೆ ಮಾಡಿರುವ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಗಮಿಸಿದಾಗ ಎಡಪಂಥೀಯ ಸಂಘಟನೆಯ ವಿದ್ಯಾರ್ಥಿಗಳು ಜೆಎನ್ ಯುನಲ್ಲಿ ಹಿಂಸಾಚಾರವನ್ನು ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಜಾವ್ಡೇಕರ್ ಆರೋಪಿಸಿದ್ದಾರೆ.
ಇಷ್ಟುದಿನ ಭಾರತೀಯ ಜನತಾ ಪಕ್ಷ ಹಾಗೂ ಎಬಿವಿಸಿ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳ ವಿರುದ್ಧ ಬೊಟ್ಟು ಮಾಡಿ ತೋರಿಸಲಾಗುತ್ತಿತ್ತು. ಆದರೆ, ಇದೆಲ್ಲ ಎಡಪಂಥೀಯ ಸಂಘಟನೆಗಳ ಪೂರ್ವನಿಯೋಜಿತ ಹಿಂಸಾಚಾರ ಎಂದು ಜಾವ್ಡೇಕರ್ ದೂರಿದ್ದಾರೆ.

ಹಿಂಸಾಚಾರಕ್ಕೂ ಮೊದಲೇ ದಾಖಲೆ ನಾಶ ಯತ್ನ:
ಜನವರಿ.05ರಂದು ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ನಡೆಸಲು ಮೊದಲೇ ಸಂಚು ರೂಪಿಸಲಾಗಿತ್ತು. ಹೀಗಾಗಿ ವಿವಿಯಲ್ಲಿನ ಸಿಸಿ ಕ್ಯಾಮರಾಗಳನ್ನು ಒಡೆದು ಹಾಕಲಾಗಿದೆ. ಸಾಕ್ಷ್ಯ ಸಿಗದಂತೆ ಮಾಡಲು ಮೊದಲೇ ಇಂಟರ್ ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ವಿರುದ್ಧವೂ ಗುಡುಗಿದ ಜಾವ್ಡೇಕರ್:
ಇನ್ನು, ಕಾಂಗ್ರೆಸ್ ಹಾಗೂ ಎಡಪಕ್ಷಗಳ ವಿರುದ್ಧವೂ ಸಚಿವ ಪ್ರಕಾಶ್ ಜಾವ್ಡೇಕರ್ ಕಿಡಿ ಕಾರಿದ್ದಾರೆ. ಜೆಎನ್ ಯು ಹಿಂಸಾಚಾರ ಪ್ರಕರಣದಲ್ಲಿ ಸುಖಾಸುಮ್ಮನೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನು ಎಳೆದು ತಂದಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications