ಜೆಎನ್ಯು ಹಿಂಸಾಚಾರ: ತಮಗೆ ತಾವೇ ಕ್ಲೀನ್ ಚಿಟ್ ಕೊಟ್ಟುಕೊಂಡ ಪೊಲೀಸರು
ನವದೆಹಲಿ, ನವೆಂಬರ್ 19: ಜನವರಿ 5ರಂದು ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಆವರಣದ ಒಳಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 'ಸ್ಥಳೀಯ ಪೊಲೀಸರ ನಿರ್ಲಕ್ಷ್ಯ' ಮತ್ತು 'ಘಟನೆಗಳ ಸಂದರ್ಭಗಳ ತನಿಖೆ'ಗಾಗಿ ರಚಿಸಲಾಗಿದ್ದ ದೆಹಲಿ ಪೊಲೀಸರ ಸತ್ಯಶೋಧನಾ ಸಮಿತಿಯು ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ.
ಜನವರಿ 5ರಂದು ವಿಶ್ವವಿದ್ಯಾಲಯದ ಆವರಣದೊಳಗೆ ನುಗ್ಗಿದ್ದ ಸುಮಾರು ನೂರಾರು ಮುಸುಕುಧಾರಿ ವ್ಯಕ್ತಿಗಳು ಬಡಿಗೆ ಮತ್ತು ರಾಡ್ ಹಿಡಿದು ದಾಂಧಲೆ ನಡೆಸಿದ್ದರು. ಘಟನೆಯಲ್ಲಿ 36 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಗಾಯಗೊಂಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗಿ, ಪ್ರಕರಣವನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಬಂಧನವಾಗಿಲ್ಲ.
ವಿವಿ ಆವರಣದ ಒಳಗೆ ಹಿಂಸಾಚಾರ ನಡೆಯುತ್ತಿದ್ದರೂ ಪೊಲೀಸರು ಒಳಗೆ ಬಾರದೆ ಹೊರಗೇ ನಿಂತಿದ್ದು ಏಕೆ ಎಂದು ಪ್ರಶ್ನೆಗಳು ಉದ್ಭವವಾಗಿದ್ದವು. ಈ ಘಟನೆಯೂ ಕೆಲವು ವಾರಗಳ ಮುನ್ನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಇದಕ್ಕೆ ವಿರುದ್ಧವಾದ ರೀತಿಯಲ್ಲಿ ಪೊಲೀಸರು ವರ್ತಿಸಿದ್ದರು. ಡಿಸೆಂಬರ್ನಲ್ಲಿ ಆವರಣದ ಒಳಗೆ ನುಗ್ಗಿದ್ದ ಪೊಲೀಸರು ಗ್ರಂಥಾಲಯದಲ್ಲಿ ಕುಳಿತಿದ್ದ ವಿದ್ಯಾರ್ಥಿಗಳನ್ನೂ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು. ಗಲಭೆಕೋರರನ್ನು ಬೆನ್ನಟ್ಟುವಾಗ ಜಾಮಿಯಾದೊಳಗೆ ಪ್ರವೇಶಿಸಿದ್ದೆವು. ಆದರೆ ಅಧಿಕಾರಿಗಳ ಅನುಮತಿ ಇಲ್ಲದ ಕಾರಣ ಜೆಎನ್ಯುದೊಳಗೆ ಪ್ರವೇಶಿಸಲು ಆಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಮುಂದೆ ಓದಿ.

ಪೊಲೀಸರ ಸಮಿತಿ ರಚನೆ
ಈ ಕುರಿತು ವಿಚಾರಣೆ ನಡೆಸಲು, ಜಂಟಿ ಪೊಲೀಸ್ ಆಯುಕ್ತೆ (ಪಶ್ಚಿಮ ವಲಯ) ಶಾಲಿನಿ ಸಿಂಗ್ ನೇತೃತ್ವದಲ್ಲಿ ನಾಲ್ವರು ಇನ್ಸ್ಪೆಕ್ಟರ್ ಮತ್ತು ಇಬ್ಬರು ಎಸಿಪಿಗಳನ್ನು ಒಳಗೊಂಡ ಸಮಿತಿಯೊಂದನ್ನು ಪೊಲೀಸ್ ಆಯುಕ್ತೆ ಅಮೂಲ್ಯ ಪಟ್ನಾಯಕ್ ಆದೇಶದಂತೆ ರಚಿಸಲಾಗಿತ್ತು.

ಎಲ್ಲರ ಹೇಳಿಕೆಯೂ ಒಂದೇ
ವಿಚಾರಣೆ ವೇಳೆ ಆಗಿನ ಡಿಸಿಪಿ ದೇವೇಂದರ್ ಆರ್ಯ, ಎಸಿಪಿ ರಮೇಶ್ ಕಕ್ಕರ್, ಎಸ್ಎಚ್ಒ ವಸಂತ್ ಕುಂಜ್ ಋತುರಾಜ್ ಮತ್ತು ಇನ್ಸ್ಪೆಕ್ಟರ್ ಆನಂದ್ ಯಾದವ್ ಅವರಿಂದ ವಿವರಣೆ ಕೇಳಲಾಗಿತ್ತು. ಈ ಎಲ್ಲ ಪೊಲೀಸರು ಜ. 5ರಂದು ಬೆಳಿಗ್ಗೆ 8 ರಿಂದ ನಡೆದ ಘಟನಾವಳಿಗಳ ಬಗ್ಗೆ ಒಂದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಬಳಿ ಲಾಠಿಯೂ ಇರಲಿಲ್ಲ
ಆಡಳಿತ ಬ್ಲಾಕ್ನ 100 ಮೀಟರ್ ಒಳಭಾಗದ ಪ್ರದೇಶದಲ್ಲಿ ಯಾವುದೇ ಧರಣಿ ಅಥವಾ ಪ್ರತಿಭಟನೆ ನಡೆಯದಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಅದನ್ನು ನಿಭಾಯಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಆ ಯಾವ ಪೊಲೀಸರ ಬಳಿಯೂ ಶಸ್ತ್ರ ಅಥವಾ ಲಾಠಿಗಳು ಇರಲಿಲ್ಲ ಎಂದು ಸಮಿತಿ ಹೇಳಿದೆ.

ಪೊಲೀಸರಿಂದ ನಿಯಂತ್ರಣಕ್ಕೆ
ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಎಲ್ಲ ಪೊಲೀಸರ ಹೇಳಿಕೆಗಳನ್ನು ದಾಖಲಿಸಿರುವ ಸತ್ಯಶೋಧನಾ ಸಮಿತಿಯು ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದ್ದು, ಇಡೀ ದಿನ ವಿ.ವಿ. ಆವರಣದಲ್ಲಿ ಉದ್ವಿಗ್ನ ವಾತಾವರಣವಿತ್ತು. ಪೊಲೀಸರ ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು ಎಂದು ವರದಿಯಲ್ಲಿ ಹೇಳಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications