ಜೆಎನ್ಯು ಗಲಭೆ: ವಾಟ್ಸಾಪ್ ಗ್ರೂಪ್ನ 37 ಮಂದಿಯ ಗುರುತು ಪತ್ತೆ
ನವದೆಹಲಿ, ಜನವರಿ 11: 'ಎಡಪಂಥೀಯರ ವಿರುದ್ಧ ಒಂದಾಗಿ' ಎಂಬ ಹೆಸರಿನ ವಾಟ್ಸಾಪ್ ಗ್ರೂಪ್ನ 60 ಸದಸ್ಯರ ಪೈಕಿ 37 ಸದಸ್ಯರನ್ನು ದೆಹಲಿ ಪೊಲೀಸರು ಗುರುತಿಸಿದ್ದಾರೆ ಎನ್ನಲಾಗಿದೆ.
ಕಳೆದ ವಾರ ಜೆಎನ್ಯುದಲ್ಲಿ ನಡೆದ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಮೇಲಿನ ದಾಳಿಗೆ ಇವರು ಸಂಬಂಧಿಸಿದ್ದವರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ. ಗುರುತು ಪತ್ತೆಯಾಗಿರುವವರಲ್ಲಿ ಸುಮಾರು ಹತ್ತು ಮಂದಿ ಹೊರಗಿನವರಾಗಿದ್ದಾರೆ.
34 ಮಂದಿ ಗಾಯಗೊಳ್ಳಲು ಕಾರಣವಾದ ಮಾರಕ ದಾಳಿಯಲ್ಲಿ ಪಾಲ್ಗೊಂಡವರಲ್ಲಿ ಕೆಲವರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ. ಹಿಂಸಾಚಾರದೊಂದಿಗೆ ನಂಟು ಹೊಂದಿರುವ ಎಡಪಕ್ಷ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಮತ್ತು ಬಿಜೆಪಿ ಬೆಂಬಲಿತ ಎಬಿವಿಪಿ ಎರಡೂ ಹೊರಗಿನವರ ಸಹಾಯ ಪಡೆದುಕೊಂಡಿವೆ. ಜೆಎನ್ಯುದಲ್ಲಿರುವ ವಿದ್ಯಾರ್ಥಿಗಳು ಹೊರಗಿನವರು ಆವರಣದ ಒಳಗೆ ಬರಲು ನೆರವು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುರುತು ಹಚ್ಚಿರುವ 37 ಮಂದಿಯಲ್ಲಿ ಒಬ್ಬಾತ ಜೆಎನ್ಯು ಎಬಿವಿಪಿ ಘಟಕದ ಕಾರ್ಯದರ್ಶಿ ಮನೀಶ್ ಜಂಗಿದ್ ಎಂದು ತಿಳಿದುಬಂದಿದೆ. ಆದರೆ ಅವರು ಈ ಗುಂಪಿನಲ್ಲಿ ತಮ್ಮ ಹೆಸರು ಇರುವುದೇ ತಿಳಿದಿಲ್ಲ ಎಂದು ಹೇಳಿದ್ದಾರೆ. 'ನನ್ನ ಫೋನ್ ಒಡೆದುಹೋಗಿತ್ತು. ಅದನ್ನು ರಿಪೇರಿ ಮಾಡಿಸಿದಾಗ ಹೊಸ ಗುಂಪಿನಲ್ಲಿ ನನ್ನ ಹೆಸರನ್ನು ಸೇರಿಸಿರುವುದು ಗೊತ್ತಾಯಿತು' ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದಾಳಿ ನಡೆದ ಆರು ದಿನಗಳ ಬಳಿಕ ಉಪ ಕುಲಪತಿ ಜಗದೀಶ್ ಕುಮಾರ್ ಅವರು ಶನಿವಾರ ಬೆಳಿಗ್ಗೆ ವಿದ್ಯಾರ್ಥಿಗಳ ಜತೆಗೆ ಮೊದಲ ಸಭೆ ನಡೆಸಿದರು.
ಸಿಸಿಟಿವಿ ದೃಶ್ಯಾವಳಿಗಳು ಮತ್ತು ವಾಟ್ಸಾಪ್ ಸಂದೇಶಗಳನ್ನು ಒಳಗೊಂಡಂತೆ ಪುರಾವೆಗಳ ರಕ್ಷಣೆಗೆ ಕೋರಿ ಜೆಎನ್ಯುದ ಪ್ರೊಫೆಸರ್ಗಳು ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದು, ಸೋಮವಾರ ವಿಚಾರಣೆ ನಡೆಯಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications