ಜೆಎನ್ ಯು ಹಿಂಸಾಚಾರ: ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ರಘುರಾಮ್ ರಾಜನ್
ನವದೆಹಲಿ, ಜನವರಿ.10: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಹೋರಾಟಕ್ಕಿಳಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಒಂದು ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇನ್ನೊಂದು ಕಡೆಯಿಂದ ಬೆಂಬಲದ ಕೂಗು ಕೇಳಿ ಬರುತ್ತಿದೆ.
ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲೇ ಹಿಂಸಾಚಾರ ನಡೆಸುವಂತಾ ಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಧ್ವನಿ ಎತ್ತಿರುವ ಬಾಲಿವುಡ್ ನಟಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಗವರ್ನರ್ ರಘುರಾಮ್ ರಾಜನ್ ಬೆಂಬಲ ಸೂಚಿಸಿದ್ದಾರೆ.
ಲಿಂಕೆದಿನ್ ಎಂಬ ಖಾಸಗಿ ಬ್ಲಾಗ್ ವೊಂದಕ್ಕೆ ರಘುರಾಮ್ ರಾಜನ್ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹಾಡುಹಡಗಲಿನಲ್ಲೇ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಕ್ಕೆ ಮುಸುಕುಧಾರಿಗಳು ನುಗ್ಗಿ ಹಿಂಸಾಚಾರ ನಡೆಸುತ್ತಾರೆ. ವಿವಿಯ ವಸ್ತುಗಳನ್ನು ಒಡೆದು ಹಾಕಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಾರೆ ಎಂದರೆ ಇದಕ್ಕಿಂತ ಆತಂಕಕಾರಿ ಬೆಳವಣಿಗೆ ಮತ್ತೊಂದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ ಹೆಸರು ಉಲ್ಲೇಖಿಸದೇ ಬೆಂಬಲ
ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಲ್ಲೆ ನಡೆಸಿದವರ ಕೈಗೆ ಸಿಕ್ಕು ಸಾಕಷ್ಟು ಮಂದಿ ಗಾಯಗೊಂಡಿದ್ದರು. ಇಂಥ ಗಾಯಾಳುಗಳ ಆರೋಗ್ಯ ವಿಚಾರಿಸಲು ತೆರಳುವುದೇ ತಪ್ಪು ಎನ್ನುವಂತೆ ಬಿಂಬಿಸಲಾಗುತ್ತಿದೆ. ಅವರು ನಟಿಸಿರುವ ಚಪ್ಪಾಕ್ ಸಿನಿಮಾ ಇದೀಗ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಮಾನವೀಯ ದೃಷ್ಟಿಯಿಂದ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಅವರಿಗೆ ಕಷ್ಟ ಬಂದಿದ್ದು, ಎಲ್ಲರೂ ಇದೀಗ ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ ಎಂದು ರಘುನಾಥ್ ರಾಜನ್ ತಿಳಿಸಿದ್ದಾರೆ.

ರಾಜಕಾರಣಕ್ಕಾಗಿ ನಡೆಯುತ್ತಿರುವ ಹೋರಾಟವಲ್ಲ
ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಅವಲೋಕಿಸಿದಾಗ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರು ಒಗ್ಗಟ್ಟಾಗಿದ್ದಾರೆ. ವೈವಿಧ್ಯಮಯ ನಂಬಿಕೆಗಳು ಇದೀಗ ಒಟ್ಟಾಗಿ ಸಾಗುತ್ತಿವೆ. ಕೇಂದ್ರ ಸರ್ಕಾರ ಹಾಗೂ ರಾಜಕಾರಣಿಗಳ ವಿರುದ್ಧ ನಡೆಯುತ್ತಿರುವ ಹೋರಾಟವೇ ಇದಕ್ಕೆ ಸಾಕ್ಷಿಯಾಗಿದೆ. ಜೆಎನ್ ಯು ಹೋರಾಟದಲ್ಲಿ ಪಾಲ್ಗೊಂಡಿದ್ದನ್ನು ಕಂಡಾಗ ಭಾರತದಲ್ಲಿ ಸಂವಿಧಾನವು ಮತ್ತಷ್ಟು ಪ್ರಕಾಶಿಸುತ್ತಿದೆ ಎಂದೆನಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಜನ್
ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ ಎಂದು ರಘುನಾಥ್ ರಾಜನ್ ಆರೋಪಿಸಿದ್ದಾರೆ. ಚುನಾವಣಾಧಿಕಾರಿ ಅಶೋಕ್ ಲವಾಸಾ ಹೆಸರನ್ನು ಉಲ್ಲೇಖಿಸದೇ ಕರ್ತವ್ಯನಿಷ್ಠೆ ತೋರಿದ ಅಧಿಕಾರಿಗೆ ಭೇಷ್ ಎಂದಿದ್ದಾರೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಾರಿಯಾದ ನೀತಿ ಸಂಹಿತೆ ಸಂಬಂಧ ಚುನಾವಣಾಧಿಕಾರಿ ಅಶೋಕ್ ಲವಾಸಾ ಅಪಸ್ವರ ಎತ್ತಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡುವಲ್ಲಿ ನಿರಾಕರಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಈಗ ಸೇಡು ತೀರಿಸಿಕೊಳ್ಳುವಂತೆ ವರ್ತಿಸುತ್ತಿದೆ ಎಂದು ದೂರಿದ್ದಾರೆ.

ಅಂದು ಮಾಡಿದ ತಪ್ಪಿಗೆ ಇಂದು ಶಿಕ್ಷೆ ಕೊಡುವುದೇ?
ಕೇಂದ್ರದಲ್ಲಿ ಎರಡನೇ ಬಾರಿಗೆ ಸರ್ಕಾರ ರಚನೆ ಆಗುತ್ತಿದ್ದಂತೆ ಚುನಾವಣಾಧಿಕಾರಿ ಅಶೋಕ್ ಲವಾಸಾ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ವರ್ತಿಸಿದೆ. ಲವಾಸಾ ಅವರ ಸಂಬಂಧಿಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ತನಿಖೆ ನಡೆಸಲಾಗುತ್ತಿದೆ. ಲವಾಸಾ ಅವರಿಗೆ ಸೇರಿದ ಐವರು ಸಂಬಂಧಿಕರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ರಾಜನ್ ಆರೋಪಿಸಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications