ಹಾರ್ವರ್ಡ್ ವಿವಿ ಹೆಸರಲ್ಲಿ ವಂಚನೆ: ಪತ್ರಕರ್ತೆ ನಿಧಿ ರಾಜ್ದಾನ್ ದೂರು
ನವದೆಹಲಿ, ಜನವರಿ 19: ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಯ ಆಫರ್ ಪಡೆದು ವಂಚನೆಗೆ ಒಳಗಾದ ಹಿರಿಯ ಪತ್ರಕರ್ತೆ ನಿಧಿ ರಾಜ್ದಾನ್ ದೆಹಲಿ ಪೊಲೀಸ್ನ ಸೈಬರ್ ಅಪರಾಧ ಘಟಕಕ್ಕೆ ದೂರು ನೀಡಿದ್ದಾರೆ.
ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ನಿಧಿ ರಾಜ್ದಾನ್ ಅವರಿಗೆ ಇ-ಮೇಲ್ ಮೂಲಕ ಆಫರ್ ಬಂದಿತ್ತು. ಅದನ್ನು ನಿಜವೆಂದು ನಂಬಿದ್ದ ನಿಧಿ, ಟ್ವಿಟ್ಟರ್ ಖಾತೆಯಲ್ಲಿ ಖುಷಿಯನ್ನು ಹಂಚಿಕೊಂಡಿದ್ದರು. ಆದರೆ ತಾವು ಫಿಶಿಂಗ್ (ಆನ್ಲೈನ್ ವಂಚನೆ) ಜಾಲಕ್ಕೆ ಬಿದ್ದಿರುವುದು ಅವರಿಗೆ ತಡವಾಗಿ ಅರಿವಿಗೆ ಬಂದಿತ್ತು.
ಫೋರ್ಜರಿ, ಗುರುತಿನ ವಂಚನೆ ಮತ್ತು ಅನಾಮಧೇಯ ವ್ಯಕ್ತಿಯ ನಟನೆಯಿಂದ ಮೋಸ ಹೋದ ಆರೋಪಗಳನ್ನು ದೆಹಲಿ ಪೊಲೀಸರು ಸೋಮವಾರ ದಾಖಲಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ನಿಧಿ ಅವರು ಜನವರಿ 16ರಂದು ಶ್ರೀನಗರದಲ್ಲಿದ್ದಾಗ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಇದೇ ರೀತಿಯ ದೂರು ಸಲ್ಲಿಸಿದ್ದರು.

ಆಗ್ನೇಯ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ದಾಖಲಿಸಿರುವ ದೂರಿನ ಆಧಾರದಲ್ಲಿ ತನಿಖೆ ನಡೆಸಲಾಗುವುದು. ಈ ಹಗರಣದ ಹಿಂದೆ ಇರುವವರು ರವಾನಿಸಿದ ಇ-ಮೇಲ್ ಸರಣಿಗಳನ್ನು ಹಾಗೂ ಈ ವಿಚಾರಕ್ಕೆ ಸಂಬಂಧಿಸಿದ ಇತರೆ ದಾಖಲೆಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
2019ರ ಡಿಸೆಂಬರ್ನಲ್ಲಿ ನಿಧಿ ರಾಜ್ದಾನ್ ಅವರಿಗೆ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಬೋಧನೆಗಾಗಿ ಆಹ್ವಾನವುಳ್ಳ ಇ-ಮೇಲ್ ರವಾನಿಸಲಾಗಿತ್ತು. ಇದರ ಬಳಿಕ ಅವರು ಕಳೆದ ಜೂನ್ ತಿಂಗಳಲ್ಲಿ ಎನ್ಡಿಟಿವಿಯ ಕಾರ್ಯಕಾರಿ ಸಂಪಾದಕಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಆದರೆ ಅವರಿಗೆ ಸುಮಾರು ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಬಂದಿದ್ದ ಈ ಸರಣಿ ಇ-ಮೇಲ್ಗಳು ಮತ್ತು ನಕಲಿ ದಾಖಲೆಗಳು ದೊಡ್ಡ ಹಗರಣ ಎನ್ನುವುದು ಕಳೆದ ವಾರವಷ್ಟೇ ಅರಿವಿಗೆ ಬಂದಿದ್ದವು. ಹೀಗಾಗಿ ಆರೋಪಿಗಳನ್ನು ಪತ್ತೆ ಮಾಡಲು ವಿಸ್ತೃತ ತನಿಖೆ ನಡೆಸುವಂತೆ ಅವರು ಸೈಬರ್ ಅಪರಾಧ ಘಟಕಕ್ಕೆ ದೂರು ನೀಡಿದ್ದರು.
ಅಲ್ಲದೆ, ಎಫ್ಬಿಐ ಅಥವಾ ಇತರೆ ಸಂಬಂಧಿತ ಸಂಸ್ಥೆಗಳಿಗೆ ಈ ಬಗ್ಗೆ ತನಿಖೆ ನಡೆಸಲು ದೂರು ನೀಡುವಂತೆ ಅವರು ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಕೋರಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications