ಕೇಂದ್ರ ಸರ್ಕಾರದಿಂದ ಜಡ್ಜ್ ಗಳ ದೂರವಾಣಿ ಕದ್ದಾಲಿಕೆ: ಕೇಜ್ರಿವಾಲ್
ದೆಹಲಿ ಹೈಕೋರ್ಟಿನ 50ನೇ ವರ್ಷಾಚರಣೆ ಸಂದರ್ಭದಲ್ಲಿ ಪಾಲ್ಗೊಂಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನ್ಯಾಯಾಧೀಶರ ದೂರವಾಣಿಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ
ನವದೆಹಲಿ, ಅಕ್ಟೋಬರ್ 31: ದೆಹಲಿ ಹೈಕೋರ್ಟಿನ 50ನೇ ವರ್ಷಾಚರಣೆ ಸಂದರ್ಭದಲ್ಲಿ ಪಾಲ್ಗೊಂಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನ್ಯಾಯಾಧೀಶರ ದೂರವಾಣಿಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಅದೇ ವೇದಿಕೆಯಲ್ಲಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಆರೋಪವನ್ನು ಅಲ್ಲಗೆಳೆದರು.
ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು ನ್ಯಾಯಾಧೀಶರ ನೇಮಕಾತಿಗಳ ವಿಚಾರ ಮಾತನಾಡುತ್ತಾ 'ನ್ಯಾಯಾಧೀಶರ ಕೆಲಸದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನ್ಯಾಯಾಧೀಶರ ದೂರವಾಣಿಗಳನ್ನು ಕದ್ದಾಲಿಸಲಾಗುತ್ತಿದೆ ಮತ್ತು ಅವರು ಮಾತನಾಡಲು ಹೆದರುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ತಪ್ಪು ಹೀಗಾಗಲು ಬಿಡಬಾರದು' ಎಂದು ಹೇಳಿದರು.

ಇದಕ್ಕೆ ಉತ್ತರವಾಗಿ ಕೇಂದ್ರ ಕಾನೂನು ಸಚಿವ ರವಿ ಶಂಕರ ಪ್ರಸಾದ್ ಅವರು, ಕೇಜ್ರಿವಾಲ್ ಮಾತುಗಳನ್ನು ನಿರಾಕರಿಸಿ, 'ನಾನು ಎರಡು ವರ್ಷಗಳಿಂದ ಸಂಪರ್ಕ ಸಚಿವನಾಗಿದ್ದೇನೆ. ನ್ಯಾಯಾಧೀಶರ ದೂರವಾಣಿಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದನ್ನು ನಾನು ನಿರಾಕರಿಸುತ್ತೇನೆ' ಎಂದು ಅವರು ಹೇಳಿದರು.
ನ್ಯಾಯಾಧೀಶರ ನೇಮಕಾತಿ ವಿಳಂಬಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದಕ್ಕೆ ಪೂರಕವಾಗಿ ಕೇಜ್ರಿವಾಲ್ ಈ ರೀತಿ ಆರೋಪ ಮಾಡಿದರು.(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications