ಆರೋಪಿಗಳ ಚುನಾವಣೆ ಸ್ಪರ್ಧೆ ನಿರ್ಬಂಧ ಅಸಾಧ್ಯ : ಸುಪ್ರೀಂ
ನವದೆಹಲಿ, ಫೆ. 19: ಗಂಭೀರ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳನ್ನು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಅವರಿದ್ದ ಪೀಠ, ಕುರಿತು ಸ್ಪಷ್ಟಪಡಿಸಿದೆ. ಅಪರಾಧ ಆರೋಪಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರುವುದು ಆಕರ್ಷಕವಾಗಿರುತ್ತದೆ, ಉತ್ತಮ ನಿರ್ಧಾರವೂ ಹೌದು. ಆದರೆ, ನ್ಯಾಯಾಲಯಕ್ಕೆ ತನ್ನದೇ ಮಿತಿ ಇದೆ. ಇಂತಹ ಆದೇಶವನ್ನು ನ್ಯಾಯಾಲಯ ಹೊರಡಿಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. [ಭಾರತದ ಜಾತ್ಯತೀತವಾಗಿರುತ್ತಾ]

"ನ್ಯಾಯಾಂಗ ಚಟುವಟಿಕೆಯ ಹೆಸರಿನಲ್ಲಿ ನಾವು ಸಂಸತ್ತಿಗೆ ಸಂಬಂಧಪಟ್ಟ ವಿಷಯದಲ್ಲಿ ತಲೆಹಾಕುವುದು ಸಾಧ್ಯವಿಲ್ಲ. ಅಧಿಕಾರದ ಪ್ರತ್ಯೇಕತೆಯು ಸಂವಿಧಾನದ ಪ್ರಾಥಮಿಕ ನೀತಿಯಾಗಿದೆ. ಅದನ್ನು ನಾವು ಗೌರವಿಸಬೇಕು" ಎಂದು ಎಚ್.ಎಲ್. ದತ್ತು ಅವರು ತಿಳಿಸಿದ್ದಾರೆ. [ಫೇಸ್ ಬುಕ್, ಟ್ವಿಟ್ಟರ್ ಕಾಮೆಂಟ್ ನಲ್ಲಿ ಕಾಮೆಂಟ್]
"ಈ ಕುರಿತು ನಿರ್ಧರಿಸುವುದು ಸಂಸತ್ತಿಗೆ ಬಿಟ್ಟಿದ್ದು. ದೇಶವನ್ನು ಹೇಗೆ ಮುನ್ನಡೆಸಬೇಕು ಹಾಗೂ ಚುನಾವಣೆಗೆ ಯಾರು ಸ್ಪರ್ಧಿಸಬೇಕು ಎಂಬುದನ್ನು ಸಂಸತ್ತು ನಿರ್ಧರಿಸುತ್ತದೆ. ನ್ಯಾಯಾಂಗ ಈ ಕುರಿತು ಕ್ರಮ ಕೈಗೊಳ್ಳುವುದು ಸಾಧ್ಯವಿಲ್ಲ" ಎಂದು ತಿಳಿಸಿದ್ದಾರೆ. [ಗಂಗಾ ಶುದ್ಧೀಕರಣ ಯಾವಾಗ?]
ಆರೋಪ ಹೊತ್ತ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಬೇಕು ಎಂದು ಹಿರಿಯ ನ್ಯಾಯವಾದಿ ದಿನೇಶ್ ದ್ವಿವೇದಿ ಸ್ವಯಂ ಸೇವಾ ಸಂಸ್ಥೆಯೊಂದರ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಹೆಚ್ಚುತ್ತಿರುವ ರಾಜಕೀಯದ ಅಪರಾಧೀಕರಣ ತಡೆಯಲು ಮಾರ್ಗದರ್ಶಿ ಸೂತ್ರಗಳನ್ನು ವಿಧಿಸಬೇಕೆಂದು ಕೋರಿದ್ದರು. [ಮದುವೆಗಾಗಿ ಮತಾಂತರ ಅಸಿಂಧು]
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications