ಪಂಚತಾರಾ ಹೋಟೆಲ್ನ ಊಟಕ್ಕೂ, ಅಯೋಧ್ಯೆಯ ಅಂತಿಮ ತೀರ್ಪಿಗೂ ಸಂಬಂಧವಿಲ್ಲ: ರಂಜನ್ ಗೊಗೊಯ್
ನವದೆಹಲಿ, ಡಿಸೆಂಬರ್ 10: ಪಂಚತಾರಾ ಹೋಟೆಲ್ನಲ್ಲಿ ಊಟ ಹಾಗೂ ವೈನ್ ಕುಡಿದಿರುವುದು ಅಯೋಧ್ಯೆ ತೀರ್ಪಿನ ಸಂಭ್ರಮವಲ್ಲ ಎಂದು ಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆಯ ಅಂತಿಮ ತೀರ್ಪು ಹಾಗೂ ಪಂಚತಾರಾ ಹೋಟೆಲ್ನ ಊಟಕ್ಕೂ ಯಾವುದೇ ಸಂಬಂಧವಿಲ್ಲ ಅದು ಸಂಭ್ರಮವೂ ಆಗಿರಲಿಲ್ಲ. ಅಯೋಧ್ಯೆ ಪ್ರಕರಣದ ವಿಚಾರಣೆಗಾಗಿ ನಾವೆಲ್ಲಾ ನ್ಯಾಯಮೂರ್ತಿಗಳು ಮೂರ್ನಾಲ್ಕು ತಿಂಗಳು ನಿರಂತರವಾಗಿ ಕೆಲಸ ಮಾಡಿದ್ದೆವು. ಎಲ್ಲರಿಗೂ ಸಹಜವಾಗಿ ಒಂದು ಬ್ರೇಕ್ ಬೇಕಿತ್ತು. ಅದಕ್ಕಾಗಿ ನಾವು ಹೋಟೆಲ್ನಲ್ಲಿ ಸೇರಿದ್ದೆವು ಹೊರತು ಅದು ಸಂಭ್ರಮವಾಗಿರಲಿಲ್ಲ.
ಅದನ್ನು ಆ ರೀತಿ ಅರ್ಥೈಸಿಕೊಳ್ಳಬೇಕಾಗಿಯೂ ಇಲ್ಲ ಎಂದು ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ತಮ್ಮ ಪುಸ್ತಕದಲ್ಲಿ ಈ ಕುರಿತು ಬರೆದಿದ್ದ ರಂಜನ್ ಗೊಗೊಯ್ ತೀರ್ಪಿನ ಬಳಿಕ ಹೋಟೆಲ್ನಲ್ಲಿ ಊಟ ಹಾಗೂ ವೈನ್ ಕುಡಿದಿದ್ದನ್ನು ಉಲ್ಲೇಖಿಸಿದ್ದರು. ಆದರೆ ಇದನ್ನು ಕೆಲವರು ಸಂಭ್ರಮ ಎಂದು ವ್ಯಾಖ್ಯಾನಿಸಿದ್ದರು. ಇದೀಗ ಮಾಧ್ಯಮದವರಿಗೆ ರಂಜನ್ ಗೊಗೊಯ್ ಸ್ಪಷ್ಟನೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತರಾಗಿ ನಾಲ್ಕು ತಿಂಗಳ ಬಳಿಕ ಅವರು ರಾಜ್ಯಸಭೆಯನ್ನು ಸೇರಿದ್ದು ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು. ನನಗೆ ರಾಜ್ಯಸಭಾ ಸದಸ್ಯರಾಗುವಂತೆ ಕೇಳಿದಾಗ ಯಾವುದೇ ಹಿಂಜರಿಕೆಯಿಲ್ಲದೆ ಒಪ್ಪಿಕೊಂಡೆ. ರಾಜ್ಯಸಭೆಯಲ್ಲಿ ಪ್ರಸ್ತುತ ಕಾನೂನು ವ್ಯವಸ್ಥೆ ಸೇರಿದಂತೆ ಹಲವು ನ್ಯೂನತೆಗಳ ವಿರುದ್ಧ ಧ್ವನಿ ಎತ್ತುವ ಹಂಬಲವಿದೆ.
ಒಂದು ವರ್ಷದಿಂದ ರಾಜ್ಯಸಭಾ ಸದಸ್ಯರಾಗಿರುವ ರಂಜನ್ ಅವರ ಹಾಜರಾತಿ ಶೇ.10ರಷ್ಟಿದೆ ಎನ್ನುವ ದೂರುಗಳು ಕೇಳಿಬಂದಿತ್ತು. ಕೊರೊನಾ ಸೋಂಕು ಹೆಚ್ಚಾಗಿದ್ದ ಕಾರಣ ಹಾಜರಾತಿ ಕಡಿಮೆ ಇತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.
ಒಂದು ಅಥವಾ ಎರಡು ಅಧಿವೇಶನದ ಬಳಿಕ ಸದನಕ್ಕೆ ಪತ್ರ ಬರೆದಿದ್ದು, ವೈದ್ಯರ ಸಲಹೆ ಮೇರೆಗೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದೆ ಎಂದು ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications