ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು: ಇದು ನಾರಿ ಶಕ್ತಿಯ ಗೆಲುವು ಎಂದ ಮೋದಿ

ನವದೆಹಲಿ, ಮಾರ್ಚ್ 20: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಗಲ್ಲುಶಿಕ್ಷೆಯಾಗಿದೆ. ಇಂದು (ಮಾರ್ಚ್ 20) ನಸುಕಿನ ಜಾವ 5.30ಕ್ಕೆ ಅತ್ಯಾಚಾರವೆಸಗಿದ್ದ ನಾಲ್ವರನ್ನು ಗಲ್ಲಿಗೇರಿಸಲಾಗಿದೆ. ಏಳು ವರ್ಷಗಳ ಬಳಿಕ ಸಿಕ್ಕ ಸಜೆಗೆ ದೇಶವೇ ಹರ್ಷ ವ್ಯಕ್ತಪಡಿಸಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ವಿಚಾರಧಾರೆಯನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಪ್ರಧಾನಿ, ''ನ್ಯಾಯ ಸಿಕ್ಕಿದೆ. ಮಹಿಳಾ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಪ್ರತಿ ಕ್ಷೇತ್ರದಲ್ಲೂ ನಾರಿ ಶಕ್ತಿ ಸಾಧನೆ ಇದೆ. ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸಿ ನಾವು ರಾಷ್ಟ್ರವನ್ನು ನಿರ್ಮಿಸಬೇಕು. ಸಮಾನತೆ ಮತ್ತು ಅವಕಾಶಗಳಿಗೆ ಒತ್ತು ನೀಡಬೇಕು'' ಎಂದಿದ್ದಾರೆ.

ದೆಹಲಿಯ ಬಸ್ ಒಂದರಲ್ಲಿ 2012ರ ಡಿಸೆಂಬರ್ 16ರಂದು ಸ್ನೇಹಿತನೆದುರೇ ಈ ನಾಲ್ವರು ಅಪರಾಧಿಗಳು ನಿರ್ಭಯಾಳನ್ನು ಅತ್ಯಾಚಾರಗೈದು ಹತ್ಯೆ ಮಾಡಿದ್ದರು. ಸತತ 7 ವರ್ಷ ಮೂರು ತಿಂಗಳ ಬಳಿಕ ನಿರ್ಭಯಾ ಸಾವಿಗೆ ನ್ಯಾಯ ದೊರೆತಂತಾಗಿದೆ.

2012 Delhi Nirbhaya Case: Justice has prevailed tweets Narendra Modi

ದೆಹಲಿಯ ತಿಹಾರ್ ಜೈಲಿನಲ್ಲಿ ಇಂದು ಮುಂಜಾನೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಲಾಯಿತು. ನಿರ್ಭಯಾ ಹಂತಕರು ಯಾವುದೇ ಅಂತಿಮ ಇಚ್ಛೆ ವ್ಯಕ್ತಪಡಿಸಿಲ್ಲ. ಗಲ್ಲಿಗೇರಿಸುವ ಮುನ್ನ ನಾಲ್ವರನ್ನು ಪ್ರತ್ಯೇಕವಾಗಿ ಮಾಜಿಸ್ಟ್ರೇಟ್ ಮಾತನಾಡಿಸಿದ್ದರು. ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ನಾಲ್ವರನ್ನು ಗಲ್ಲಿಗೇರಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+