ದೀಪಕ್ ಮಿಶ್ರಾ ವಿರುದ್ಧ ಕುರಿಯನ್ ಜೋಸೆಫ್ ಶಾಕಿಂಗ್ ಹೇಳಿಕೆ!
ನವದೆಹಲಿ, ಡಿಸೆಂಬರ್ 03: ಇತ್ತೀಚೆಗಷ್ಟೇ ನಿವೃತ್ತರಾದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಕುರಿಯನ್ ಜೋಸೆಫ್ ಅವರು ನೀಡಿರುವ ಹೇಳಿಕೆ ವಿವಾದದ ಕೇಂದ್ರಬಿಂದುವಾಗಿದೆ.
ಆಗಿನ ಮುಖ್ಯನ್ಯಾಯಮೂರ್ತಿಯಾಗಿದ್ದ ದೀಪಕ್ ಮಿಶ್ರಾ ಅವರು ರಿಮೋಟ್ ಕಂಟ್ರೋಲ್ ಸಿಜೆಐ ಆಗಿದ್ದರು. ಪ್ರಕರಣಗಳ ಹಂಚಿಕೆಯ ವಿಷಯದಲ್ಲಿ ಅವರ ಮೇಲೆ ಕೆಲವು ರಾಜಕೀಯ ಒತ್ತಡಗಳಿದ್ದವು. ಕೆಲವು ಶಕ್ತಿಗಳ ಪ್ರಭಾವದಿಂದ ಅವರು ಪ್ರಕರಣಗಳನ್ನು ತಮಗಿಷ್ಟಬಂದವರಿಗೆ ಹಂಚುತ್ತಿದ್ದರು. ರಾಜಕೀಯ ಅಭಿಪ್ರಾಯದ ಆಧಾರದ ಮೇಲೆ ಅವರು ತಾರತಮ್ಯ ಮಾಡಿ ಪ್ರಕರಣ ಹಂಚುತ್ತಿದ್ದರು ಎಂದು ಜೋಸೆಫ್ ದೂರಿದ್ದಾರೆ.
ಕಳೆದ ಜನವರಿ 12 ರಂದು ಸುಪ್ರೀಂ ಕೋರ್ಟ್ ನ ನಾಲ್ವರು ಹಿರಿಯ ನ್ಯಾಯಾಧೀಶರು ಸೇರಿ, ಸಿಜೆಐ ವಿರುದ್ಧವೇ ಬಹಿರಂಗವಾಗಿ ಆರೋಪ ಮಾಡಿದ್ದರು, ಪತ್ರಿಕಾಗೋಷ್ಠಿ ಕರೆದು ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸೂಚನೆ ನೀಡಿದ್ದರು.

ನ್ಯಾ.ಜೋಸೆಫ್ ಅವರೊಂದಿಗೆ, ನ್ಯಾ ಜಸ್ಟಿ ಚಲಮೇಶ್ವರ್, ಹಾಲಿ ಸಿಜೆಐ ನ್ಯಾ.ರಂಜನ್ ಗೊಗೊಯ್, ನ್ಯಾ.ಮದನ್ ಬಿ ಲಾಕೂರ್ ಅವರು ಕರೆದಿದ್ದ ಈ ಪತ್ರಿಕಾ ಗೋಷ್ಠಿ ಸಾಕಷ್ಟು ವಿವಾದ ಸೃಷ್ಟಿಸಿತ್ತು.
ಇದೀಗ ನಿವೃತ್ತ ನ್ಯಾಯಾಧೀಶ ಜೊಸೆಫ್ ಅವರು ಮತ್ತೆ ದೀಪಕ್ ಮಿಶ್ರಾ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ದೀಪಕ್ ಮಿಶ್ರಾ ಅವರನ್ನು ಯಾವುದೋ ಬಾಹ್ಯ ಶಕ್ತಿ ನಿಯಂತ್ರಿಸುತ್ತಿತ್ತು. ಅದು ನಮ್ಮ ಅನುಭವಕ್ಕೆ ಬರುತ್ತಿದ್ದಂತೆಯೇ ನಾವು ಅವರನ್ನು ಭೇಟಿ ಮಾಡಿ ಮಾತನಾಡಿದೆವು, ಪತ್ರ ಬರೆದೆವು. ಸುಪ್ರೀಂ ಕೋರ್ಟ್ ನ ಸ್ವಾತಂತ್ರ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವಂತೆ ಮನವಿ ಮಾಡಿದೆವು. ಆದರೆ ಇದ್ಯಾವುದೂ ಫಲನೀಡದಿದ್ದಾಗ, ಬೇರೆ ದಾರಿ ಕಾಣದೆ ಪತ್ರಿಕಾ ಗೋಷ್ಠಿ ಕರೆದೆವು ಎಂದು ಕುರಿಯನ್ ಜೋಸೆಫ್ ಹೇಳಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications