ದೀಪಕ್ ಮಿಶ್ರಾ ವಿರುದ್ಧ ಕುರಿಯನ್ ಜೋಸೆಫ್ ಶಾಕಿಂಗ್ ಹೇಳಿಕೆ!
ನವದೆಹಲಿ, ಡಿಸೆಂಬರ್ 03: ಇತ್ತೀಚೆಗಷ್ಟೇ ನಿವೃತ್ತರಾದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಕುರಿಯನ್ ಜೋಸೆಫ್ ಅವರು ನೀಡಿರುವ ಹೇಳಿಕೆ ವಿವಾದದ ಕೇಂದ್ರಬಿಂದುವಾಗಿದೆ.
ಆಗಿನ ಮುಖ್ಯನ್ಯಾಯಮೂರ್ತಿಯಾಗಿದ್ದ ದೀಪಕ್ ಮಿಶ್ರಾ ಅವರು ರಿಮೋಟ್ ಕಂಟ್ರೋಲ್ ಸಿಜೆಐ ಆಗಿದ್ದರು. ಪ್ರಕರಣಗಳ ಹಂಚಿಕೆಯ ವಿಷಯದಲ್ಲಿ ಅವರ ಮೇಲೆ ಕೆಲವು ರಾಜಕೀಯ ಒತ್ತಡಗಳಿದ್ದವು. ಕೆಲವು ಶಕ್ತಿಗಳ ಪ್ರಭಾವದಿಂದ ಅವರು ಪ್ರಕರಣಗಳನ್ನು ತಮಗಿಷ್ಟಬಂದವರಿಗೆ ಹಂಚುತ್ತಿದ್ದರು. ರಾಜಕೀಯ ಅಭಿಪ್ರಾಯದ ಆಧಾರದ ಮೇಲೆ ಅವರು ತಾರತಮ್ಯ ಮಾಡಿ ಪ್ರಕರಣ ಹಂಚುತ್ತಿದ್ದರು ಎಂದು ಜೋಸೆಫ್ ದೂರಿದ್ದಾರೆ.
ಕಳೆದ ಜನವರಿ 12 ರಂದು ಸುಪ್ರೀಂ ಕೋರ್ಟ್ ನ ನಾಲ್ವರು ಹಿರಿಯ ನ್ಯಾಯಾಧೀಶರು ಸೇರಿ, ಸಿಜೆಐ ವಿರುದ್ಧವೇ ಬಹಿರಂಗವಾಗಿ ಆರೋಪ ಮಾಡಿದ್ದರು, ಪತ್ರಿಕಾಗೋಷ್ಠಿ ಕರೆದು ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸೂಚನೆ ನೀಡಿದ್ದರು.

ನ್ಯಾ.ಜೋಸೆಫ್ ಅವರೊಂದಿಗೆ, ನ್ಯಾ ಜಸ್ಟಿ ಚಲಮೇಶ್ವರ್, ಹಾಲಿ ಸಿಜೆಐ ನ್ಯಾ.ರಂಜನ್ ಗೊಗೊಯ್, ನ್ಯಾ.ಮದನ್ ಬಿ ಲಾಕೂರ್ ಅವರು ಕರೆದಿದ್ದ ಈ ಪತ್ರಿಕಾ ಗೋಷ್ಠಿ ಸಾಕಷ್ಟು ವಿವಾದ ಸೃಷ್ಟಿಸಿತ್ತು.
ಇದೀಗ ನಿವೃತ್ತ ನ್ಯಾಯಾಧೀಶ ಜೊಸೆಫ್ ಅವರು ಮತ್ತೆ ದೀಪಕ್ ಮಿಶ್ರಾ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ದೀಪಕ್ ಮಿಶ್ರಾ ಅವರನ್ನು ಯಾವುದೋ ಬಾಹ್ಯ ಶಕ್ತಿ ನಿಯಂತ್ರಿಸುತ್ತಿತ್ತು. ಅದು ನಮ್ಮ ಅನುಭವಕ್ಕೆ ಬರುತ್ತಿದ್ದಂತೆಯೇ ನಾವು ಅವರನ್ನು ಭೇಟಿ ಮಾಡಿ ಮಾತನಾಡಿದೆವು, ಪತ್ರ ಬರೆದೆವು. ಸುಪ್ರೀಂ ಕೋರ್ಟ್ ನ ಸ್ವಾತಂತ್ರ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವಂತೆ ಮನವಿ ಮಾಡಿದೆವು. ಆದರೆ ಇದ್ಯಾವುದೂ ಫಲನೀಡದಿದ್ದಾಗ, ಬೇರೆ ದಾರಿ ಕಾಣದೆ ಪತ್ರಿಕಾ ಗೋಷ್ಠಿ ಕರೆದೆವು ಎಂದು ಕುರಿಯನ್ ಜೋಸೆಫ್ ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications