ನೊಬೆಲ್ ಪುರಸ್ಕೃತ ಕೈಲಾಸ್ ಸತ್ಯಾರ್ಥಿ ಮನೆಗೆ ಕನ್ನ ಹಾಕಿದ್ದ ಮೂವರ ಬಂಧನ
ಫೆ.7ರಂದು ದೆಹಲಿಯಲ್ಲಿರುವ ಮನೆಯಲ್ಲಿ ಚಿನ್ನಾಭರಣ ಸೇರಿದಂತೆ ನೊಬೆಲ್ ಪಾರಿತೋಷಕ ಪ್ರಮಾಣ ಪತ್ರ ಕಳುವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ನವದೆಹಲಿ: ಫೆಬ್ರವರಿ. 12 : ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರ ಮನೆಯಲ್ಲಿ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ರಜನ್, ಸುನೀಲ್ ಹಾಗೂ ವಿನೋದ್ ಬಂಧಿತ ಆರೋಪಿಗಳು. ಬಂಧಿತರಿಂದ ನೊಬೆಲ್ ಪ್ರಶಸ್ತಿ ಪತ್ರ ಮತ್ತು ಚಿನ್ನದ ಅಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. [ನೊಬೆಲ್ ಪುರಸ್ಕೃತ ಕೈಲಾಸ್ ಸತ್ಯಾರ್ಥಿ ಮನೆಯಲ್ಲಿ ಕಳ್ಳತನ]
ಕೈಲಾಸ್ ಸತ್ಯಾರ್ಥಿ ಅವರು ವಿದೇಶದಲ್ಲಿ ಪ್ರವಾಸದಲ್ಲಿದ್ದಾಗ ಆರೋಪಿಗಳು ಫೆಬ್ರವರಿ 7ರಂದು ದೆಹಲಿಯ ಅಲಕ್ ನಂದಾ ಕಾಲೋನಿಯಲ್ಲಿರುವ ಅರಾವಳಿ ಆಪಾರ್ಟ್ಮೆಂಟ್ ನಲ್ಲಿರುವ ಸತ್ಯಾರ್ಥಿ ಅವರ ಮನೆಯ ಬಾಗಿಲು ಮುರಿದು ನೊಬೆಲ್ ಪ್ರಶಸ್ತಿ ಪತ್ರ ಹಾಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದರು.
ಬಂಧಿತರಿಂದ ಕಳವುವಾಗಿದ್ದ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಅವರು ಪಾಕಿಸ್ತಾನ ಶಿಕ್ಷಣ ಹಕ್ಕು ಹೋರಾಟಗಾರ್ತಿ ಮಲಾಲಾ ಯೂಸಫ್ ಜೊತೆ 2014ರಲ್ಲಿ ವಿಶ್ವಸಂಸ್ಥೆ ನೊಬೆಲ್ ಶಾಂತಿ ಪ್ರಶಸ್ತಿ ಹಂಚಿಕೊಂಡಿದ್ದರು.