ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ
ನವದೆಹಲಿ, ಫೆಬ್ರವರಿ 12 : ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರ ಆಯ್ಕೆಯಾಗಿದ್ದಾರೆ.
ಸೋಮವಾರ ನಡೆದ ಚುನಾವಣೆಯಲ್ಲಿ ಕಂಬಾರ ಅವರು ಮರಾಠಿ ಲೇಖಕ ಬಾಲಚಂದ್ರ ನೆಮಾಡೆ ಹಾಗೂ ಒಡಿಯಾ ಲೇಖಕಿ ಪ್ರತಿಭಾ ರೊಯ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕಂಬಾರ ಅವರು 56 ಮತಗಳನ್ನು ಗಳಿಸಿದರೆ ಪ್ರತಿಭಾ ರೊಯ್ ಅವರು 29 ಹಾಗೂ ನೆಮಾಡೆ ಅವರು ಕೇವಲ ನಾಲ್ಕು ಮತಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
ಚಂದ್ರಶೇಖರ ಕಂಬಾರ ಅವರು ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಹೀಗೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಕಂಬಾರರ ಜನನ, ವಿದ್ಯಾಭ್ಯಾಸ: ಕಂಬಾರರು 1937 ಜನವರಿ 2 ರಂದು ಬೆಳಗಾವಿ ಜಿಲ್ಲೆಯ ಘೋಡಿಗೇರಿ ಗ್ರಾಮದಲ್ಲಿ ಜನಿಸಿದರು. ಗೋಕಾಕ್ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, 1962ರಲ್ಲಿ ಕರ್ನಾಟಕ ವಿವಿಯಿಂದ ಎಂಎ ಪದವಿ ಹಾಗು ಪಿಎಚ್ ಡಿ ಪದವಿ ಪಡೆದಿದ್ದಾರೆ.

ಪ್ರಸಿದ್ಧ ಕಾವ್ಯ ಹಾಗೂ ನಾಟಕಗಳು: ಮುಗುಳು, ಹೇಳತೇನ ಕೇಳ, ಸಾವಿರಾರು ನೆರಳು, ಬೆಳ್ಳಿ ಮೀನು ಕಾವ್ಯ ಗಳು ಹಾಗೂ ಜೋಕುಮಾರಸ್ವಾಮಿ, ಚಾಲೇಶ, ಸಂಗಾಬಾಳ್ಯ, ಕಾಡುಕುದುರೆ ಹರಕೆಯ ಕುರಿ, ಸಿರಿಸಂಪಿಗೆ, ತಿರುಕನ ಕನಸು, ಮಹಾಮಾಯಿ ನಾಟಕಗಳನ್ನು ರಚಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications