ಹಗರಣ ಬಯಲಿಗೆಳೆಯುತ್ತೇನೆ ಎಂದ ಸಚಿವನನ್ನು ಹೊರ ದಬ್ಬಿದ ಕೇಜ್ರಿ

ದೆಹಲಿಯಲ್ಲಿನ ನೀರಾವರಿ ಹಗರಣ ಬಯಲಿಗೆಳೆಯುತ್ತೇನೆ ಎಂದಿದ್ದ ನೀರಾವರಿ ಮತ್ತು ಪ್ರವಾಸೋದ್ಯಮ ಸಚಿವ ಕಪಿಲ್‌ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.ಕೈಲಾಶ್‌ ಗೆಹ್ಲೋಟ್‌ ಅವರನ್ನು ನೇಮಿಸಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ.

ನವದೆಹಲಿ, ಮೇ 07: ದೆಹಲಿಯಲ್ಲಿನ ನೀರಾವರಿ ಹಗರಣ ಬಯಲಿಗೆಳೆಯುತ್ತೇನೆ ಎಂದಿದ್ದ ನೀರಾವರಿ ಮತ್ತು ಪ್ರವಾಸೋದ್ಯಮ ಸಚಿವ ಕಪಿಲ್‌ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.ಕೈಲಾಶ್‌ ಗೆಹ್ಲೋಟ್‌ ಅವರನ್ನು ನೇಮಿಸಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡಲಿಲ್ಲ ಎಂಬ ಕಾರಣಕ್ಕೆ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

'ಭ್ರಷ್ಟಾಚಾರ ಆರೋಪವಿಲ್ಲದ, ಸಿಬಿಐ ವಿಚಾರಣೆ ಎದುರಿಸದ ಏಕೈಕ ಸಚಿವ ನಾನು. ನನಗೆ ಮಾಹಿತಿಯನ್ನೂ ನೀಡದೆ ನನ್ನನ್ನು ಸಂಪುಟದಿಂದ ಹೊರಹಾಕಲಾಗಿದೆ. ಇದು ಕೇಜ್ರಿವಾಲ್ ಅವರ ಏಕಪಕ್ಷೀಯ ನಿರ್ಧಾರ' ಎಂದು ಮಿಶ್ರಾ ಟ್ವೀಟ್ ಮಾಡಿದ್ದಾರೆ.

Kapil Mishra sacked as Delhi water minister

ಯಾರಿಗೆ ಸ್ಥಾನ?: ಕೈಲಾಶ್‌ ಗೆಹ್ಲೋಟ್ ಅವರ ಜತೆಗೆ ಸೀಮಾಪುರಿ ಕ್ಷೇತ್ರದ ಶಾಸಕ ರಾಜೇಂದ್ರ ಗೌತಮ್ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಭಾಗಿಯಾಗಿದ್ದಾರೆ ಎನ್ನಲಾದ ಟ್ಯಾಂಕರ್ ಹಗರಣದ ಬಗ್ಗೆ ಭಾನುವಾರ ಸ್ಫೋಟಕ ಮಾಹಿತಿಗಳನ್ನು ನೀಡುವುದಾಗಿ ಮಿಶ್ರಾ ಅವರು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+