'ನಾರಿಮನ್ ಕರ್ನಾಟಕ ಪರ ವಾದ ಮಾಡಲ್ಲ ಎಂದು ಹೇಳಿಲ್ಲ!'
ನವದೆಹಲಿ, ಸೆ. 30: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ಆದೇಶಗಳನ್ನು ಸತತವಾಗಿ ವಿಳಂಬ ಮಾಡುವ ಮೂಲಕ ಪರೋಕ್ಷವಾಗಿ ನ್ಯಾಯಾಂಗದ ವಿರುದ್ಧ ನಿಂತಿರುವ ಕರ್ನಾಟಕ ಸರ್ಕಾರದ ಕ್ರಮದಿಂದ ವಕೀಲ ಫಾಲಿ ಎಸ್ ನಾರಿಮನ್ ಬೇಸತ್ತಿದ್ದಾರೆ. ಕರ್ನಾಟಕದ ಪರ ಇನ್ಮುಂದೆ ವಾದ ಮಂಡಿಸುವುದಿಲ್ಲ ಎಂದು ಮುನಿಸಿಕೊಂಡು ಹೊರ ನಡೆದಿದ್ದಾರೆ. ಆದರೆ, ಇದು ಸತ್ಯಕ್ಕೆ ದೂರವಾದ ಮಾತು ಎಂದು ಕರ್ನಾಟಕ ಸರ್ಕಾರ ಸ್ಪಷ್ಟನೆ ನೀಡಿದೆ.
ಇಲ್ಲಿ ತನಕ ನಾರಿಮನ್ ಹಾಗೂ ಅವರ ವಕೀಲರ ತಂಡ ಮಂಡಿಸಿದ ವಾದವನ್ನು ಕರ್ನಾಟಕ ಸರ್ಕಾರ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಮರ್ಥಿಸಿಕೊಂಡು ಬಂದಿದ್ದರು. [ತ್ವರಿತವಾಗಿ ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕರ್ನಾಟಕಕ್ಕೆ ಆಘಾತ]

ಆದರೆ, ಸುಪ್ರೀಂ ಕೋರ್ಟಿನಲ್ಲಿ ಶುಕ್ರವಾರದಂದು ನಡೆದ ವಿಚಾರಣೆ ವೇಳೆ ಕರ್ನಾಟಕದ ಪರ ವಕೀಲರು ಸರಿಯಾದ ವಾದ ಮಂಡಿಸದ ಕಾರಣ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.[ಅ.1ರಿಂದ 6ರವರೆಗೆ ಕಾವೇರಿ ನೀರು ಹರಿಸಿ : ಸುಪ್ರೀಂ ಕೋರ್ಟ್]

* ಸುಪ್ರೀಂ ಆದೇಶದಿಂದಾಗಿ ಈಗ ತಮಿಳುನಾಡಿಗೆ ನೀರು ಬಿಡಲೇಬೇಕು, ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
* ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಅರ್ಜಿ ಹಾಕಿಲ್ಲ, ಆದರೆ, ಅರ್ಜಿ ಹಾಕಬಹುದು. ಆದರೆ, ಕಾಲಾವಕಾಶವೇ ಇಲ್ಲ.
* ಉಮಾ ಭಾರತಿ ನೇತೃತ್ವದ ಸಭೆ ವಿಫಲವಾದ ಬಗ್ಗೆ ಅಟಾರ್ನಿ ಜನರಲ್ ಅವರು ಸುಪ್ರೀಂಗೆ ವರದಿ ನೀಡಿದ್ದು, ಈ ಬಗ್ಗೆ ಕೋರ್ಟ್ ಪರಿಶೀಲಿಸುವಂತೆ ಕೋರಬಹುದಾಗಿತ್ತು.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]
ಮಾಜಿ ಸಂಸದ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಅವರು ಕರ್ನಾಟಕ ವಕೀಲರ ಆಯೋಗದ ಮುಖ್ಯಸ್ಥರಾದ ಫಾಲಿ ಎಸ್ ನಾರಿಮನ್ ಅವರನ್ನು ತೆಗೆದು ಹಾಕುವಂತೆ ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಆದರೆ, ಜಲವಿವಾದದ ವಿಷಯದಲ್ಲಿ ನಾರಿಮನ್ ಅವರು ಆಳವಾಗಿ ಅಧ್ಯಯನ ಮಾಡಿದ್ದಾರೆ. ಅವರು ಮಂಡಿಸಿದ ವಾದ ಸಮರ್ಥವಾಗಿದೆ. ಅವರನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು. ಸದ್ಯಕ್ಕೆ ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಶನಿವಾರದಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications