ಲೋಕಸಭೆಯಲ್ಲಿ ಕರ್ನಾಟಕದ ಬಿಕ್ಕಟ್ಟಿನ ಸದ್ದು, ಬಿಜೆಪಿಗೆ ಛೀಮಾರಿ!
ನವದೆಹಲಿ, ಜುಲೈ 08: ಕರ್ನಾಟಕದಲ್ಲಿ ಶಾಸಕರ ಸರಣಿ ರಾಜೀನಾಮೆಯಿಂದಾಗಿ ರಾಜಕೀಯ ಅಸ್ಥಿರತೆ ಉಂಟಾಗುವಂತೆ ಮಾಡಿರುವ ಭಾರತೀಯ ಜನತಾ ಪಕ್ಷವು, ಬೇಟೆಗಾರ ಪಕ್ಷವಾಗಿ ಮಾರ್ಪಟ್ಟಿದೆ. ಶಾಸಕರ ಬೇಟೆ ಮಾಡಿ, ಸರ್ಕಾರವನ್ನು ಉರುಳಿಸುತ್ತಿದೆ ಎಂದು ಸಂಸತ್ತಿನಲ್ಲಿ ಇಂದು(ಜುಲೈ 08) ವಿಪಕ್ಷ ನಾಯಕ ಅಧೀರ್ ರಂಜನ್ ಚೌಧುರಿ ಅವರು ಛೀಮಾರಿ ಹಾಕಿದ್ದಾರೆ.
ಜುಲೈ 01ರಂದು ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ರಾಜೀನಾಮೆ ನೀಡಿದ ಬಳಿಕ 9 ಕಾಂಗ್ರೆಸ್ ಶಾಸಕರು ಹಾಗೂ 3 ಜೆಡಿಎಸ್ ಶಾಸಕರು ಒಟ್ಟಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿದವರ ಪೈಕಿ 10 ಮಂದಿಯನ್ನು ಮುಂಬೈಯ ಐಷಾರಾಮಿ ಹೋಟೆಲ್ ನಲ್ಲಿರಿಸಲಾಗಿದೆ. ಈ ಎಲ್ಲಾ ಘಟನೆ ಹಿಂದೆ ಮೋದಿ ಸರ್ಕಾರದ ಕೈವಾಡವಿದೆ. ಬಿಜೆಪಿ ಈ ರೀತಿ ಪ್ರಜಾಪ್ರಭುತ್ವವನ್ನು ಹಾಳುಗೆಡವುತ್ತಿದೆ ಎಂದು ಅಧೀರ್ ರಂಜನ್ ಅವರು ಹೇಳಿದರು.
ಲೋಕಸಭೆಯಲ್ಲಿ ಅಧೀರ್ ಅವರು ಮಾತನಾಡುವ ವೇಳೆಗಾಗಲೇ ಎಚ್ ಡಿ ಕುಮಾರಸ್ವಾಮಿ ಸರ್ಕಾರದ 22 ಸಚಿವರು ರಾಜೀನಾಮೆ ಸಲ್ಲಿಸಿದ್ದು, ಸರಣಿ ರಾಜೀನಾಮೆಯಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.

ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಉಂಟು ಮಾಡುತ್ತಿರುವ ಬಿಜೆಪಿ ಬಗ್ಗೆ ಸಂಸತ್ತಿನಲ್ಲಿ ಗಟ್ಟಿಯಾಗಿ ಕಾಂಗ್ರೆಸ್ ದನಿಯೆತ್ತಲಿದೆ, ಬಿಜೆಪಿ ಕುದುರೆ ವ್ಯಾಪಾರ, ಬೇಟೆಯನ್ನು ಖಂಡಿಸುತ್ತೇವೆ ಎಂದು ಚೌಧುರಿ ಅವರು ಹೇಳಿದರು.
ಆದರೆ, ಕರ್ನಾಟಕದಲ್ಲಿನ ರಾಜಕೀಯ ಬಿಕ್ಕಟ್ಟಿನಲ್ಲಿ ಯಾವುದೇ ರೀತಿ ಕೈವಾಡವಿಲ್ಲ ಎಂದು ಬಿಜೆಪಿಯ ಕೇಂದ್ರ ನಾಯಕರು ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಮನ್ವಯ ಕೊರತೆಯಿಂದ ಉಂಟಾದ ಭಿನ್ನಮತ ಇದಾಗಿದ್ದು, ಆಂತರಿಕ ಸಮಸ್ಯೆಗೆ ಬಿಜೆಪಿ ಕಾರಣವಲ್ಲ ಎಂದು ಹೇಳಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications