ಕರ್ನಾಟಕ ಪ್ರವಾಹ ನಷ್ಟದ ಅಂದಾಜು ವರದಿ ತಿರಸ್ಕರಿಸಿದ ಕೇಂದ್ರ
ನವದೆಹಲಿ, ಅಕ್ಟೋಬರ್ 4: ಕರ್ನಾಟಕದ ನೆರೆ ನಷ್ಟದ ಅಂದಾಜು ಸರಿ ಇಲ್ಲ ಎಂದು ಹೇಳಿ ವರದಿಯನ್ನು ಕೇಂದ್ರ ತಿರಸ್ಕರಿಸಿದೆ.
ಕುಸಿದ ಮನೆಗಳೆಲ್ಲವೂ 5 ಲಕ್ಷ ರೂ ಬೆಲೆಬಾಳುತ್ತದೆಯೇ, ನೆರೆಯಿಂದ 38ಸಾವಿರ ಕೋಟಿ ರೂ ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ., ನೀಡಿರುವ ವರದಿ ಸ್ಪಷ್ಟೀಕರಣ, ಅಂದಾಜಿಸಲು ಸೂಚಿಸಲಾಗಿದೆ.
ನೆರೆ ಪರಿಹಾರಕ್ಕೆ ಪೂರಕ ಬಜೆಟ್: ಸಂಪುಟ ನಿರ್ಧಾರ
ಕಳೆದ ಜುಲೈ ತಿಂಗಳಲ್ಲಿ ನದಿಗಳು ಉಕ್ಕಿ ಹರಿದಿದ್ದರಿಂದ ಪ್ರವಾಹ ಸ್ಥಿತಿ ಉದ್ಭವವಾಗಿದ್ದು ಅಂದಾಜು 38 ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ತಿಳಿಸಲಾಗಿದೆ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಯಮಾವಳಿ ಅನ್ವಯ 3,500 ಕೋಟಿ ರೂ ಪರಿಹಾರದ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಕೇಂದ್ರದ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಕೇಂದ್ರದ ಅಧ್ಯಯನ ತಂಡ ನೀಡಿರುವ ವರದಿ ಪ್ರಕಾರ 1.15 ಲಕ್ಷ , ಪ್ರತಿ ಮನೆಗೆ ಐದು ಲಕ್ಷದಂತೆ ಪರಿಹಾರ ಕೋರಲಾಗಿತ್ತು, ಆದರೆ ನೆಲಕಚ್ಚಿದ ಮನೆಗಳಷ್ಟೂ ಐದು ಲಕ್ಷ ಬೆಲೆಬಾಳುತ್ತವೆಯೇ ಎಂದು ಕೇಂದ್ರ ಪ್ರಶ್ನಿಸಿದೆ ಹಾಗೆಯೇ ತನಿಖೆ ನಡೆಸಲು ಸೂಚಿಸಲಾಗಿದೆ.
ಬೆಂಗಳೂರಲ್ಲಿ ಸಂಜೆ ಒಳಗೆ ಮನೆಗೆ ಸೇರ್ಕೊಳ್ಳಿ, ಭಾರಿ ಮಳೆ ಸಾಧ್ಯತೆ
ನಿಯಮಾವಳಿ ಬದಿಗಿಟ್ಟು ನಷ್ಟವನ್ನು ಅಂದಾಜಿಸಲಾಗಿದೆ. ಆದರೆ ರಾಜ್ಯ ಸರ್ಕಾರ ಸಲ್ಲಸಿರುವ ನಷ್ಟದೊಂದಿಗೆ ತಾಳೆಯಾಗುತ್ತಿಲ್ಲ. ಕೂಡಲೇ ವರದಿಗೆ ಸ್ಪಷ್ಟೀಕರಣ ನೀಡಬೇಕು ಎಂದು ಕೇಂದ್ರವು ರಾಜ್ಯಕ್ಕೆ ಸೂಚಿಸಿತ್ತು.