ಅನರ್ಹ ಶಾಸಕರ ಅರ್ಜಿ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂ
ನವದೆಹಲಿ, ಅಕ್ಟೋಬರ್ 24: ಕರ್ನಾಟಕದ 17 ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದೆ. ಚುನಾವಣಾ ಆಯೋಗ ಈಗಾಗಲೇ 15 ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಸುಪ್ರೀಂ ಆದೇಶ ಕುತೂಹಲಕ್ಕೆ ಕಾರಣವಾಗಿದೆ.
ಹಲವು ಮುಂದೂಡಿಕೆಗಳ ಬಳಿಕ ನಿನ್ನೆ ಮತ್ತು ಇಂದು ಅನರ್ಹ ಶಾಸಕರ ಕುರಿತು ವಿಚಾರಣೆ ನಡೆಯುತ್ತಿದೆ. 14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರು ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನೆ ಮಾಡಲಾಗಿದೆ.
ಅನರ್ಹ ಶಾಸಕರು ದೆಹಲಿಯಲ್ಲಿದ್ದು, ವಕೀಲರ ಜೊತೆ ನಿರಂತರ ಮಾತುಕತೆಯನ್ನು ನಡೆಸುತ್ತಿದ್ದಾರೆ. ಸ್ಪೀಕರ್ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿಯಲಿದೆಯೇ?, ವಜಾಗೊಳಿಸಲಿದೆಯೇ? ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾದ ಅನರ್ಹ ಶಾಸಕರು ಸ್ಪೀಕರ್ ಆದೇಶ ವಜಾಗೊಂಡರೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆ. ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಯಾವ ಸೂಚನೆ ನೀಡಲಿದೆ ಎಂದು ಕಾದು ನೋಡಬೇಕು.
ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಬಗ್ಗೆ ಕ್ಷಣ-ಕ್ಷಣದ ಮಾಹಿತಿಯನ್ನು 'ಒನ್ ಇಂಡಿಯಾ ಕನ್ನಡ' ಈ ಪುಟದಲ್ಲಿ ನೀಡಲಿದೆ.












Click it and Unblock the Notifications