ಶಾಸಕರ ಫಾರಿನ್ ಪ್ರವಾಸಕ್ಕೆ ರಾಹುಲ್ ಗಾಂಧಿ ತಡೆ!

ರಾಜ್ಯದ 100 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದ್ದರೂ ಶಾಸಕರು ವಿದೇಶ ಪ್ರವಾಸಕ್ಕೆ ಹೊರಟಿರುವುದು ತೀವ್ರ ಟೀಕೆಗೆ ಗುರಿಯಾಗಿತ್ತು. ವಿಧಾನಮಂಡಲದ ವಿವಿಧ ಸಮಿತಿಗಳು ವಿದೇಶ ಪ್ರವಾಸ ಕೈಗೊಳ್ಳಲು ಸಜ್ಜಾಗಿದ್ದು, ಸ್ಪೀಕರ್ ಅನುಮತಿಗಾಗಿ ಕಾದು ಕುಳಿತಿದ್ದವು. ಸದ್ಯ ಹೈ ಕಮಾಂಡ್ ಮಟ್ಟದಿಂದಲೇ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ತಡೆ ತರುವಲ್ಲಿ ಯಶಸ್ವಿಯಾಗಿದ್ದಾರೆ.[ಅಧ್ಯಯನಕ್ಕಾಗಿ ವಿದೇಶಕ್ಕೆ ಹೊರಟ ಶಾಸಕರು!]
ನವದೆಹಲಿಯಲ್ಲಿ ರಾಹುಲ್ ಗಾಂಧಿ ಶುಕ್ರವಾರ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ ನಡೆಸಿದರು. ಸಭೆಗೂ ಮುನ್ನ ಕರ್ನಾಟಕ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಶಾಸಕರ ವಿದೇಶ ಪ್ರವಾವನ್ನು ರದ್ದುಗೊಳಿಸುವಂತೆ ಸಿಎಂಗೆ ರಾಹುಲ್ ಸೂಚನೆ ನೀಡಿದ್ದಾರೆ.
ಕರ್ನಾಟಕದ ಶಾಸಕರು ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ರಾಷ್ಟ್ರೀಯ ವಾಹಿನಿಗಳಲ್ಲೂ ಚರ್ಚೆ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಅವರ ಜೊತೆ ಈ ಕುರಿತು ಮಾಹಿತಿ ಪಡೆದ ರಾಹುಲ್ ಗಾಂಧಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಪ್ರವಾಸ ಕೈಗೊಳ್ಳುವುದು ಸರಿಯಲ್ಲ. ಶಾಸಕರ ವಿದೇಶ ಪ್ರವಾಸವನ್ನು ರದ್ದುಗೊಳಿಸಿ ಎಂದು ತಿಳಿಸಿದ್ದಾರೆ. [ಶಾಸಕರ ವಿದೇಶ ಪ್ರವಾಸ ಖಚಿತ]
ಗುರುವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಾಸಕರ ವಿದೇಶ ಪ್ರವಾಸವನ್ನು ಸಮರ್ಥಿಸಿಕೊಂಡಿದ್ದರು. ಅದು ಸಮಿತಿಗಳು ಕೈಗೊಂಡ ನಿರ್ಣಯ ಎಂದು ಹೇಳಿದ್ದರು. ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಸಹ ಶಾಸಕರು ವಿದೇಶ ಪ್ರವಾಸ ಹೋಗುವುದು ಖಂಡಿತ. ಈ ಬಾರಿ ಅಂತಹ ಬರಪರಿಸ್ಥಿತಿ ರಾಜ್ಯದಲ್ಲಿಲ್ಲ ಎಂದು ಹೇಳುವ ಮೂಲಕ ಸಮರ್ಥನೆ ನೀಡಿದ್ದರು.
ಸದ್ಯ ಕಾಂಗ್ರೆಸ್ ಉಪಾಧ್ಯಕ್ಷರೇ ಶಾಸಕರ ಪ್ರವಾಸಕ್ಕೆ ಬ್ರೇಕ್ ಹಾಕಿದ್ದಾರೆ. ಇದರಿಂದ ಅಧ್ಯಯನ ಮಾಡಲು ವಿದೇಶಕ್ಕೆ ಹೋಗುವ ಶಾಸಕರ ಕನಸಿಗೆ ತಣ್ಣೀರು ಸುರಿದಂತಾಗಿದ್ದು, ವಿದೇಶ ಪ್ರವಾಸಕ್ಕೆ ಬ್ರೇಕ್ ಬಿದ್ದಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications