ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದ ಕರ್ನಾಟಕ ರಾಜಕೀಯ
ನವದೆಹಲಿ, ಜುಲೈ 09: ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ.
ಆಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜಕೀಯ ದೊಂಬರಾಟ, ಮತಹಾಕಿದ ಮತದಾರರ ಸಂಕಟ
ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, "ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ" ಎಂದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಕರ್ನಾಟಕದಲ್ಲಿ ಏನಾಘುತ್ತಿದೆಯೋ ಅದು ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಅದನ್ನು ಪರಿಹರಿಸಿಕೊಳ್ಳುವ ಸಾಮರ್ಥ್ಯವಿಲ್ಲದ ಕಾಂಗ್ರೆಸ್, ತನ್ನ ಆಂತರಿಕ ವಿಷಯಗಳನ್ನು ಲೋಕಸಭೆಯಲ್ಲಿ ತಂದು ಸದನವೂ ಸರಿಯಾಗಿ ನಡೆಯಲು ಅನುವು ಮಾಡಿಕೊಡದಿರುವುದು ಸರಿಯಲ್ಲ" ಎಂದಿದ್ದಾರೆ.