ಕರ್ನಾಟಕದ ಮಾವು ನೇರ ರಫ್ತಿಗಾಗಿ ಕೇಂದ್ರಕ್ಕೆ ಮನವಿ
ನವದೆಹಲಿ, ಏಪ್ರಿಲ್ 29: ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಧ್ಯಕ್ಷೆ ಎಂ. ಕಮಲಾಕ್ಷಿ ರಾಜಣ್ಣ ನೇತೃತ್ವದ ಕರ್ನಾಟಕದ ನಿಯೋಗವು ಕೇಂದ್ರ ಕೃಷಿ ಕಾರ್ಯದರ್ಶಿ ಶೋಭನ್ ಕುಮಾರ್ ಪಟ್ನಾಯಕ್ ರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಬೆಳೆಯುವ ಮಾವು ಉತ್ಪನ್ನ ನೇರ ರಫ್ತಿಗೆ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿದೆ.
ಮಾವು ಬೆಳೆಗಾರರು ಬೆಳೆದ ಉತ್ಪನ್ನಕ್ಕೆ ಉತ್ತಮ ಮೌಲ್ಯ ಒದಗಿಸಲು ಮತ್ತು ರಫ್ತುದಾರರಿಗೆ ಉತ್ತಮ ಗುಣಮಟ್ಟದ ಹಣ್ಣು ದೊರಕಿಸುವ ನಿಟ್ಟಿನಲ್ಲಿ ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಉತ್ತಮಕಾರ್ಯ ನಡೆಸುತ್ತಿದೆ. ಆದರೆ, ನೇರ ರಫ್ತು ವ್ಯವಸ್ಥೆ ಇಲ್ಲದೆ ವಿದೇಶಗಳಿಗೆ ಇಲ್ಲಿನ ವಿಶಿಷ್ಟ ತಳಿಗಳನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ.[ಮೈಸೂರಿನ ರಸ್ತೆ ಬದಿಯಲ್ಲೇ ಮಾವಿನಸಂತೆ..]

ಮಾವು ಬೆಳೆಯುವುದರಲ್ಲಿ ಉತ್ತರಪ್ರದೇಶ, ಆಂಧ್ರಪ್ರದೇಶ ನಂತರದ ಸ್ಥಾನದಲ್ಲಿರುವ ಕರ್ನಾಟಕವು ಆಲ್ಫೊಸೋ, ಬಂಗಾನ್ ಪಲ್ಲಿ, ಮಲ್ಲಿಕಾ, ರಸಪುರಿ, ತೋತಾಪುರಿ ಸೇರಿದಂತೆ ವಿವಿಧ ತಳಿಗಳಿಗೆ ಹೆಸರುವಾಸಿಯಾಗಿದೆ. ಸುಮಾರು 2 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ.[ಸೌದಿ ಮಾವು ಮೇಳ: ಮಂಡ್ಯ ಮಾವಿಗೆ ಬೇಡಿಕೆ]
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಹಾಗೂ ತೋಟಗಾರಿಕಾ ಇಲಾಖೆ, ಅಪೆಡಾ ಮತ್ತು ಇನೋವಾ ಅಗ್ರಿ ಬಯೋ ಪಾರ್ಕ್ ನ ಸದಸ್ಯರು ನಿಯೋಗದಲ್ಲಿದ್ದರು. ಕಮಲಾಕ್ಷಿ ರಾಜಣ್ಣ, ಕದಿರೇಗೌಡ, ಕೆಪಿ ವೆಂಕಟೇಶ್, ಕಾಂತರಾಜ್ ಹಾಗೂ ಕೆಎಸ್ ಎಂಡಿಎಂಸಿಯ ಗುಣವಂತ ಅವರು ಕೃಷಿ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು. ಈ ವರ್ಷ ಸುಮಾರು 14 ರಿಂದ 15 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಮಾವು ಉತ್ಪನ್ನ ಕಾಣುವ ನಿರೀಕ್ಷೆ ಕರ್ನಾಟಕಕ್ಕಿದೆ.[ಹಣ್ಣುಗಳ ರಾಜನಿಗೆ ಸಿಕ್ತು ಪ್ರಧಾನಿ ಮೋದಿ ಹೆಸರು]
ಸದ್ಯಕ್ಕೆ ರಾಜ್ಯದಲ್ಲಿ ಬೆಳೆಯುವ ಮಾವು ಹಾಗೂ ಮಾವಿನ ಉತ್ಪನ್ನಗಳನ್ನು ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ರಫ್ತು ಮಾಡಿ ನಂತರ ಅಲ್ಲಿಂದ ಬೇರೆಡೆಗೆ ಕಳಿಸುವ ವ್ಯವಸ್ಥೆಯಿದೆ. ಇದರ ಬದಲು ನೇರ ರಫ್ತು ಸೌಲಭ್ಯಕ್ಕಾಗಿ ರಾಜ್ಯ ಬೇಡಿಕೆ ಸಲ್ಲಿಸಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications