ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ, ಮಾಯಾ, ಅಖಿಲೇಶ್ ರನ್ನು ಭೇಟಿಯಾಗಲಿರುವ ಕೆಸಿಆರ್

|
Google Oneindia Kannada News

Recommended Video

ನರೇಂದ್ರ ಮೋದಿಯನ್ನ ಭೇಟಿಯಾಗಲಿದ್ದಾರೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ | Oneindia Kannada

ಹೈದರಾಬಾದ್, ಡಿಸೆಂಬರ್ 26: ತೆಲಂಗಾಣ ರಾಷ್ಟ್ರ ಸಮಿತಿ ಮುಖಂಡ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಂಯುಕ್ತ ಕೂಟ(Federal Front) ರಚನೆಯ ಕುರಿತು ಉತ್ಸುಕತೆ ತೋರುತ್ತಿರುವ ಕೆಸಿಆರ್ ಮೋದಿ ಅವರನ್ನು ಭೇಟಿಯಾಗುತ್ತಿರುವುದು ಕುತೂಹಲ ಕೆರಳಿಸಿದೆ.

ಸಮೀಕ್ಷೆಗಳಿಗೂ ಅಚ್ಚರಿ ಮೂಡಿಸಿದ ತೆಲಂಗಾಣ ಫಲಿತಾಂಶಸಮೀಕ್ಷೆಗಳಿಗೂ ಅಚ್ಚರಿ ಮೂಡಿಸಿದ ತೆಲಂಗಾಣ ಫಲಿತಾಂಶ

ಆದರೆ ಪ್ರಧಾನಿ ಅವರನ್ನು ಕೆಸಿಆರ್ ಭೇಟಿಯಾಗುತ್ತಿರುವುದು ಕೇವಲ ಸೌಜನ್ಯದ ಭೇಟಿ ಎನ್ನಲಾಗಿದೆ. ನಂತರ ಕೆಸಿಆರ್ ಉತ್ತರ ಪ್ರದೇಶಕ್ಕೆ ತೆರಳಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಎಸ್ಪಿ ಮುಖಂಡ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಲಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ 'ಬಾಹುಬಲಿ ಮುಹೂರ್ತ'ದಲ್ಲಿ ಅಧಿಕಾರ ಸ್ವೀಕಾರತೆಲಂಗಾಣ ಸಿಎಂ ಕೆಸಿಆರ್ 'ಬಾಹುಬಲಿ ಮುಹೂರ್ತ'ದಲ್ಲಿ ಅಧಿಕಾರ ಸ್ವೀಕಾರ

KCR to meet PM Modi, Mayawati, Akhilesh Yadav

ಪ್ರಾದೇಶಿಕ ಪಕ್ಷಗಳನ್ನೆಲ್ಲ ಒಗ್ಗೂಡಿಸಿ, ಸಂಯುಕ್ತ ಕೂಟವನ್ನು ರಚಿಸಲು ಮುಂದಾಗಿದ್ದ ಕೆ ಚಂದ್ರಶೇಖರ್ ರಾವ್ ಈಗಾಗಲೇ ಬಿಜು ಜನತಾ ದಳದ ಮುಖಂಡ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿದ್ದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಾಯಾವತಿ ಅವರನ್ನೂ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿ

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಹೊರಗಿಟ್ಟು, ಪ್ರಾದೇಶಿಕ ಪಕ್ಷಗಳು ಒಗ್ಗೂಡಿ ಸಂಯುಕ್ತ ಕೂಟ ನಿರ್ಮಿಸುವುದು ಕೆಸಿಆರ್ ಕನಸು. 2019 ರ ಲೋಕಸಭಾ ಚುನಾವಣೆಯನ್ನೂ ಬಿಜೆಪಿ-ಕಾಂಗ್ರೆಸ್ ಅನ್ನು ಹೊರಗಿಟ್ಟೇ ಎದುರಿಸಲು ಈ ಸಂಯುಕ್ತ ಕೂಟ ಮುಂದಾಗಿದೆ.

English summary
TRS president and Chief Minister K. Chandrasekhar Rao who is camping in Delhi would likely meet Prime Minister Narendra Modi and BSP chief Mayawati and SP chief Akhilesh Yadav in Uttar pradesh on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X