ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಹೈಡ್ರಾಮಕ್ಕೆ ತೆರೆ
ನವದೆಹಲಿ, ಜ.22 : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಆಮ್ ಆದ್ಮಿ ಪಕ್ಷದ ಹೈಡ್ರಾಮಕ್ಕೆ ತೆರೆ ಬಿದ್ದಿದೆ. ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಜೆ ಮೇಲೆ ಕಳುಹಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆಯನ್ನು ವಾಪಸ್ ಪಡೆದಿದೆ.
ಮಂಗಳವಾರ ನಡೆದ ಹಲವು ನಾಟಕೀಯ ಬೆಳವಣಿಗೆಗಳ ನಂತರ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಾತ್ರಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಇದರಿಂದ ದೆಹಲಿ ಪೊಲೀಸರು ಮತ್ತು ಜನರು ನಿಟ್ಟುಸಿರು ಬಿಟ್ಟಿದ್ದಾರೆ. [ಮಂಗಳವಾರದ ನಾಟಕೀಯ ಬೆಳವಣಿಗೆಗಳು]

ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಜೆ ಮೇಲೆ ಕಳುಹಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆಯನ್ನು ವಾಪಸ್ ಪಡೆದಿದೆ. ದೆಹಲಿ ಪೊಲೀಸರ ನಿಯಂತ್ರಣಾಧಿಕಾರವನ್ನೂ ಕೇಳಿದ್ದ ಕೇಜ್ರಿವಾಲ್ ಆ ಕುರಿತು ಯಾವುದೇ ಬೇಡಿಕೆ ಇಡದೆ ಧರಣಿಯನ್ನು ಮುಕ್ತಾಯಗೊಳಿಸಿರುವುದು ಅಚ್ಚರಿ ಮೂಡಿಸಿದೆ.[ದೆಹಲಿ ಅರಾಜಕತೆ ಕಿರಣ್ ಬೇಡಿ ಸಂದರ್ಶನ]
ಸಚಿವ ಸೋಮನಾಥ್ ಭಾರತಿ ಅವರ ನಿರ್ದೇಶನದ ಮೇರೆಗೆ ವೇಶ್ಯಾವಾಟಿಕೆ ಹಾಗೂ ಮಾದಕ ದ್ರವ್ಯ ಜಾಲದ ಮೇಲೆ ಕ್ರಮ ಕೈಗೊಳ್ಳಲು ನಿರಾಕರಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ರೈಲ್ವೆ ಭವನದ ಮುಂದೆ ಸೋಮವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರು.
ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಗಣರಾಜ್ಯೋತ್ಸವ ಆಚರಣೆಗೆ ಅಡ್ಡಿ ಪಡಿಸುವುದಾಗಿಯೂ ಪಕ್ಷದ ಕಾರ್ಯಕರ್ತರು ಬೆದರಿಕೆ ಹಾಕಿದ್ದರು. ಮಂಗಳವಾರ ರಾತ್ರಿ ಸಿಎಂ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅವರು ಧರಣಿ ಅಂತ್ಯಗೊಳಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ಭೇಟಿ ಮಾಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷದ ಬೇಡಿಕೆಯನ್ನು ಈಡೇರಿಸಲು ಲೆ.ಗವರ್ನರ್ ಭಾಗಶಃ ಒಪ್ಪಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಿಲ್ಲಿಸಿದೆವು ಎಂದು ಹೇಳಿದ್ದಾರೆ. ಕರ್ತವ್ಯ ಪಾಲಿಸದ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಾವು ಆಗ್ರಹಿಸಿದ್ದೆವು. ಆದರೆ ನಿರ್ಲಕ್ಷ್ಯಪ್ರಕರಣದ ನ್ಯಾಯಾಂಗ ತನಿಖೆ ಬಾಕಿ ಇರುವಂತೆಯೇ ಇಬ್ಬರು ಅಧಿಕಾರಿಗಳನ್ನು ರಜೆ ಮೇಲೆ ಕಳುಹಿಸಲಾಗಿದೆ. ಪ್ರತಿಭಟನೆ ನಿಲ್ಲಿಸೋಣ. ಇದು ದಿಲ್ಲಿ ಜನರ ವಿಜಯ ಎಂದು ಕೇಜ್ರಿವಾಲ್ ಘೋಷಿಸಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications