'ಅರವಿಂದ್ ಕೇಜ್ರಿವಾಲ್ ಸಿಐಎ ಏಜೆಂಟ್ ಅಂತೆ!'
ನವದೆಹಲಿ, ಮಾ.9: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ಕಾನೂನು ವಿಭಾಗ ಅಧ್ಯಕ್ಷ ಅಶ್ವಿನ್ ಉಪಾಧ್ಯಯ್ ಅವರು ಪಕ್ಷದ ಮುಖ್ಯಸ್ಥ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳುಗಾರ, ಸಿಐಎ ಏಜೆಂಟ್ ಎಂದು ಕರೆದಿದ್ದಾರೆ.
ಭಾನುವಾರ ಮಥುರಾದ ಚುನಾವಣಾ ಪ್ರಚಾರ ಮೆರವಣಿಗೆ ಭಾಗವಹಿಸಲು ಹೊರಡುತ್ತಿದ್ದ ಕೇಜ್ರಿವಾಲ್ ಅವರನ್ನು ಅಡ್ಡಗಟ್ಟಿ ಅಶ್ವಿನ್ ಜಗಳವಾಡಿದರು. ಇಬ್ಬರ ಮಧ್ಯೆಯೂ ಬಿರುಸಿನ ಮಾತಿನ ಸಮರ ನಡೆದಿದೆ. ಅಶ್ವಿನ್ ಅವರು ಈ ವ್ಯಕ್ತಿ ಸುಳ್ಳುಗಾರ, ಈತ ಸುಳ್ಳು ಹೇಳುತ್ತಿದ್ದಾನೆ ಎಂದು ಅರಚತೊಡಗಿದರು.
ಭ್ರಷ್ಟಾಚಾರ, ಕೋಮುವಾದ, ಹೈಕಮಾಂಡ್ ಸಂಸ್ಕೃತಿ, ಜಾತಿವಾದ ಎಲ್ಲದರ ನಿವಾರಣೆ ಆಮ್ ಆದ್ಮಿ ಪಕ್ಷದ ಧ್ಯೇಯವಾಗಿತ್ತು. ಆದರೆ ಈಗ ಆಪ್ ಇವೆಲ್ಲದರ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಅಶ್ವಿನ್ ದೂರಿದರು. ಘಟನೆ ನಂತರ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್ ಅವರು ಅಶ್ವಿನ್ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಮಾಧ್ಯಮದವರ ಮುಂದೆ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಶ್ವಿನ್ ಅವರು ಕೇಜ್ರಿವಾಲ್ ರಿಗೆ 11 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ, ಕೇಜ್ರಿವಾಲ್ ತಮ್ಮ ಪ್ರಶ್ನೆಗಳಿಗೆ ಉತ್ತರಿಸಿಲ್ಲ. ಅರವಿಂದ್ ಉತ್ತರಿಸುವವವರೆಗೂ ತಾನು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಅಶ್ವಿನ್ ಹೇಳಿದ್ದಾರೆ.ಅಶ್ವಿನ್ ಅವರಿಗೆ ಮತ್ತೊಬ್ಬ ಬಂಡಾಯಗಾರ ವಿನೋದ್ ಕುಮಾರ್ ಬಿನ್ನಿ ಅವರ ಬೆಂಬಲ ಸಿಗುವ ಸಾಧ್ಯತೆಯಿದೆ.
ಆಮ್ ಅದ್ಮಿ ಪಕ್ಷದ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ ಅಶ್ಚಿನ್ ಆವರು ಪಕ್ಷ ದೇಶದ್ರೋಹಿ ಸಂಘಟನೆಗಳ ಕೈಗೊಂಬೆಯಾಗಿ ವರ್ತಿಸುತ್ತಿದೆ.ಫೋರ್ಡ್ ಫೌಂಡೇಶನ್ ಸೇರಿದಂತೆ ಅನೇಕ ವಿದೇಶಿ ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷಕ್ಕೆ ಯಥೇಚ್ಛವಾಗಿ ಹಣ ಹರಿದು ಬಂದಿದೆ. ಕಳೆದ ಹತ್ತು ವರ್ಷಗಳಿಂದ ಹಣ ಸಂಗ್ರಹದ ಲೆಕ್ಕಾಚಾರ ಹಾಕಿದರೆ ಫೋರ್ಡ್ ಫೌಂಡೇಶನ್ ವೊಂದರಿಂದಲೇ 4000 ಕೋಟಿ ರು ಭಾರತದ ಎನ್ ಜಿಒಗಳಿಗೆ ಸಿಕ್ಕಿದೆ. ಅದರಲ್ಲಿ ಮಾವೋವಾದಿ, ಉಗ್ರ ಸಂಘಟನೆಗಳು ಸೇರಿದೆ ಎಂದು ಅಶ್ವಿನ್ ಹೇಳಿದ್ದಾರೆ.
ಅಶ್ವಿನ್ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ವಕ್ತಾರ ದೀಪಕ್ ಬಾಜಪೇಯಿ, ಎಲ್ಲಾ ಆರೋಪಗಳು ನಿರಾಧಾರ, ಅಶ್ವಿನ್ ಅವರು ಎಎಪಿ ಕಾನೂನು ವಿಭಾಗದ ಅಧ್ಯಕ್ಷರಾಗಿಲ್ಲ, ಅವರು ಕೇವಲ ಒಬ್ಬ ಸದಸ್ಯರಾಗಿದ್ದು, ಕಳೆದ ವಾರವೇ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಅವ್ಯವಹಾರ ನಡೆದಿಲ್ಲ ಎಲ್ಲವೂ ಪಾರದರ್ಶಕವಾಗಿ ನಡೆದಿದೆ ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications