ಲೋಕೋಪಯೋಗಿ ಇಲಾಖೆ ಹಗರಣ: ಕೇಜ್ರಿವಾಲ್ ಸಂಬಂಧಿ ಬಂಧನ
ನವದೆಹಲಿ, ಮೇ 10: ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿರುವ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿ ವಿನಯ್ ಬನ್ಸಾಲ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ವಿನಯ್ ಬನ್ಸಾಲ್ ಅವರು ಕೇಜ್ರಿವಾಲ್ ಅವರ ಸೋದರ ಸಂಬಂಧಿ ಸುರೇಂದರ್ ಬನ್ಸಾಲ್ ಅವರ ಮಗ. ಅವರನ್ನು ಗುರುವಾರ ಬೆಳಿಗ್ಗೆ ಬಂಧಿಸಿರುವುದನ್ನು ಎಸಿಬಿ ಮುಖ್ಯಸ್ಥ ಅರವಿಂದ್ ದೀಪ್ ಸ್ಪಷ್ಟಪಡಿಸಿದ್ದಾರೆ.
ತಂದೆ ಪಾಲುದಾರಿಕೆ ಹೊಂದಿರುವ ಕಂಪೆನಿಯನ್ನು ತಾವು ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದ ವಿನಯ್ ಬನ್ಸಾಲ್, ನಿರ್ಮಾಣ ಕಾಮಗಾರಿಗೆ ಬಳಕೆ ಮಾಡುವ ಸಲಕರಣೆಗಳನ್ನು ಖರೀದಿಸುವ ಸಲುವಾಗಿ ಹಣ ಬಿಡುಗಡೆ ಮಾಡಿಸಿಕೊಳ್ಳಲು ನಕಲಿ ಬಿಲ್ಗಳನ್ನು ಸಲ್ಲಿಸಿದ್ದರು. ಅಂತಹ ಯಾವುದೇ ಕಂಪೆನಿ ಇಲ್ಲದಿರುವುದು ತನಿಖೆ ವೇಳೆ ತಿಳಿದುಬಂದಿತ್ತು. ಬಿಲ್ಗಳು ಸಹ ನಕಲಿ ಎಂಬುದು ಪತ್ತೆಯಾಗಿತ್ತು ಎಂದು ಅವರು ಹೇಳಿದ್ದಾರೆ.

ಸುರೇಂದರ್ ಬನ್ಸಾಲ್ ಅವರು ನಡೆಸುತ್ತಿರುವ ಕಂಪೆನಿ ಸೇರಿದಂತೆ ಮೂರು ಎಫ್ಐಆರ್ಗಳನ್ನು ಎಸಿಬಿ ಕಲೆದ ವರ್ಷದ ಮೇ 9ರಂದು ದಾಖಲಿಸಿತ್ತು.
ರಸ್ತೆ ಭ್ರಷ್ಟಾಚಾರ ವಿರೋಧಿ ಸಂಘಟನೆ (ಆರ್ಎಸಿಒ) ಸಂಸ್ಥಾಪಕ ರಾಹುಲ್ ಶರ್ಮಾ ಅವರು, ಕೇಜ್ರಿವಾಲ್ ಮತ್ತು ಲೋಕೋಪಯೋಗಿ ಸಚಿವ ಸತ್ಯೇಂದ್ರ ಜೈನ್ ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡು ಬನ್ಸಾಲ್ ಅವರಿಗೆ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಅವರ ಹೆಸರನ್ನು ಎಫ್ಐಆರ್ನಲ್ಲಿ ದಾಖಲಿಸಿಲ್ಲ.
ದೆಹಲಿಯ ಬಾಕೋಲಿ ಮತ್ತು ಇಂದಿರಾ ನೆಹರು ಕ್ಯಾಂಪ್ ಪ್ರದೇಶದಲ್ಲಿರುವ ಎರಡು ನಿವೇಶನಗಳಲ್ಲಿ ಕಟ್ಟಡ ಕಾಮಗಾರಿಗಾಗಿ 6 ಕೋಟಿ ಮೌಲ್ಯದ ನಕಲಿ ಬಿಲ್ಗಳನ್ನು ಸೃಷ್ಟಿಸಿದ್ದರು ಎನ್ನಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications