ಫೆ. 14ರ ನಂಟು ಕಳಚಿಕೊಂಡ ಕೇಜ್ರಿವಾಲ್, ಫೆ.16ಕ್ಕೆ ಮುಹೂರ್ತ
ನವದೆಹಲಿ, ಫೆಬ್ರವರಿ 12: ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅರವಿಂದ್ ಕೇಜ್ರಿವಾಲ್ ಸಜ್ಜಾಗಿದ್ದಾರೆ. ಫೆಬ್ರವರಿ 14ರ ಜೊತೆ ನಂಟು ಹೊಂದಿದ್ದ ಕೇಜ್ರಿವಾಲ್ ಈ ಬಾರಿ ಬೇರೆ ದಿನಾಂಕದಂದು ಪದಗ್ರಹಣ ಸಮಾರಂಭ ನಿಗದಿಯಾಗಿದೆ. ಫೆಬ್ರವರಿ 16ರಂದು ಕೇಜ್ರಿವಾಲ್ ಹಾಗೂ ಎಎಪಿ ಕ್ಯಾಬಿನೆಟ್ ಸದಸ್ಯರೆಲ್ಲರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರ ಗದ್ದುಗೆಗೇರಿದೆ. ದೆಹಲಿ ವಿಧಾನಸಭೆ ಚುನಾವಣೆ 2020ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ರಾದೇಶಿಕ ಪಕ್ಷ ಎಎಪಿ ಎದುರು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಶರಣಾಗಿವೆ. ಸತತ ಎರಡನೇ ಬಾರಿಗೆ ಬಿಜೆಪಿ ವಿರೋಧ ಪಕ್ಷ ಸ್ಥಾನವೂ ಸಿಗದಂಥ ಪರಿಸ್ಥಿತಿಗೆ ದೂಡಲ್ಪಟ್ಟಿದೆ. ಇನ್ನು ದೇಶದ ಪುರಾತನ ಪಕ್ಷ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾದರೆ, ಸ್ಪರ್ಧಿಸಿದ್ದ 70 ಅಭ್ಯರ್ಥಿಗಳ ಪೈಕಿ 63 ಮಂದಿ ಠೇವಣಿ ಕಳೆದುಕೊಂಡಿದ್ದಾರೆ.
ಎಎಪಿ 62 ಹಾಗೂ ಬಿಜೆಪಿ 8 ಸ್ಥಾನಗಳಿಸಿದೆ. 2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ, ಲೋಕಸಭೆ ಚುನಾವಣೆಯಲ್ಲಿ ಮಾಡಿದ ಕಮಾಲ್ ವಿಧಾನಸಭೆಯಲ್ಲಿ ತೋರುವಲ್ಲಿ ಬಿಜೆಪಿ ವಿಫಲವಾಗಿದೆ.

ಮೊದಲ ಬಾರಿಗೆ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ 48 ದಿನಗಳ ಆಡಳಿತದ ನಂತರ ಫೆಬ್ರವರಿ 14, 2014ರಂದು ರಾಜೀನಾಮೆ ಸಲ್ಲಿಸಿದರು. ನಂತರ ಎಎಪಿ ಅಧಿಕಾರ ಬಂದ ಬಳಿಕ 2015ರಲ್ಲಿ ರಾಮ್ ಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಿದ್ದು ಫೆಬ್ರವರಿ 14ರಂದು ಎಂಬುದು ವಿಶೇಷ. ಫೆಬ್ರವರಿ 14, 2018ರಂದು ಮೂರುವರ್ಷಗಳ ಅಧಿಕಾರ ಅವಧಿ ಕಂಡ ಕೇಜ್ರಿವಾಲ್ ಈಗ ಮತ್ತೊಮ್ಮೆ ಫೆಬ್ರವರಿ 14ದಿನದಂದೇ ಎಎಪಿ 3.0ಕ್ಕೆ ಚಾಲನೆ ನೀಡುವ ಸಾಧ್ಯತೆಯಿತ್ತು. ಆದರೆ, ಫೆ.14ರ ಬದಲಿಗೆ ಫೆ.16ರಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications