ಫೆ. 14ರ ನಂಟು ಕಳಚಿಕೊಂಡ ಕೇಜ್ರಿವಾಲ್, ಫೆ.16ಕ್ಕೆ ಮುಹೂರ್ತ
ನವದೆಹಲಿ, ಫೆಬ್ರವರಿ 12: ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅರವಿಂದ್ ಕೇಜ್ರಿವಾಲ್ ಸಜ್ಜಾಗಿದ್ದಾರೆ. ಫೆಬ್ರವರಿ 14ರ ಜೊತೆ ನಂಟು ಹೊಂದಿದ್ದ ಕೇಜ್ರಿವಾಲ್ ಈ ಬಾರಿ ಬೇರೆ ದಿನಾಂಕದಂದು ಪದಗ್ರಹಣ ಸಮಾರಂಭ ನಿಗದಿಯಾಗಿದೆ. ಫೆಬ್ರವರಿ 16ರಂದು ಕೇಜ್ರಿವಾಲ್ ಹಾಗೂ ಎಎಪಿ ಕ್ಯಾಬಿನೆಟ್ ಸದಸ್ಯರೆಲ್ಲರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರ ಗದ್ದುಗೆಗೇರಿದೆ. ದೆಹಲಿ ವಿಧಾನಸಭೆ ಚುನಾವಣೆ 2020ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ರಾದೇಶಿಕ ಪಕ್ಷ ಎಎಪಿ ಎದುರು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಶರಣಾಗಿವೆ. ಸತತ ಎರಡನೇ ಬಾರಿಗೆ ಬಿಜೆಪಿ ವಿರೋಧ ಪಕ್ಷ ಸ್ಥಾನವೂ ಸಿಗದಂಥ ಪರಿಸ್ಥಿತಿಗೆ ದೂಡಲ್ಪಟ್ಟಿದೆ. ಇನ್ನು ದೇಶದ ಪುರಾತನ ಪಕ್ಷ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾದರೆ, ಸ್ಪರ್ಧಿಸಿದ್ದ 70 ಅಭ್ಯರ್ಥಿಗಳ ಪೈಕಿ 63 ಮಂದಿ ಠೇವಣಿ ಕಳೆದುಕೊಂಡಿದ್ದಾರೆ.
ಎಎಪಿ 62 ಹಾಗೂ ಬಿಜೆಪಿ 8 ಸ್ಥಾನಗಳಿಸಿದೆ. 2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ, ಲೋಕಸಭೆ ಚುನಾವಣೆಯಲ್ಲಿ ಮಾಡಿದ ಕಮಾಲ್ ವಿಧಾನಸಭೆಯಲ್ಲಿ ತೋರುವಲ್ಲಿ ಬಿಜೆಪಿ ವಿಫಲವಾಗಿದೆ.

ಮೊದಲ ಬಾರಿಗೆ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ 48 ದಿನಗಳ ಆಡಳಿತದ ನಂತರ ಫೆಬ್ರವರಿ 14, 2014ರಂದು ರಾಜೀನಾಮೆ ಸಲ್ಲಿಸಿದರು. ನಂತರ ಎಎಪಿ ಅಧಿಕಾರ ಬಂದ ಬಳಿಕ 2015ರಲ್ಲಿ ರಾಮ್ ಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಿದ್ದು ಫೆಬ್ರವರಿ 14ರಂದು ಎಂಬುದು ವಿಶೇಷ. ಫೆಬ್ರವರಿ 14, 2018ರಂದು ಮೂರುವರ್ಷಗಳ ಅಧಿಕಾರ ಅವಧಿ ಕಂಡ ಕೇಜ್ರಿವಾಲ್ ಈಗ ಮತ್ತೊಮ್ಮೆ ಫೆಬ್ರವರಿ 14ದಿನದಂದೇ ಎಎಪಿ 3.0ಕ್ಕೆ ಚಾಲನೆ ನೀಡುವ ಸಾಧ್ಯತೆಯಿತ್ತು. ಆದರೆ, ಫೆ.14ರ ಬದಲಿಗೆ ಫೆ.16ರಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications