ಅಕಾಡೆಮಿ ತುರ್ತು ಸಭೆಯ ಮುನ್ನ ಲೇಖಕರ ಪ್ರತಿಭಟನೆ
ನವದೆಹಲಿ, ಅಕ್ಟೋಬರ್ 23 : ಕನ್ನಡ ಸಾಹಿತಿ ಡಾ. ಎಂಎಂ ಕಲಬುರ್ಗಿ ಅವರ ಹತ್ಯೆಯನ್ನು ಖಂಡಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿರುವ ಭಾರತದ ಖ್ಯಾತ ಲೇಖಕರ ಮತ್ತು ಸಾಹಿತ್ಯ ಅಕಾಡೆಮಿಯ ನಡುವಿನ ತಾಕಲಾಟ ವಾಕ್ಯುದ್ಧದ ಹಂತಕ್ಕೆ ಬಂದು ತಲುಪಿದೆ.
ಕರ್ನಾಟಕದ ಲೇಖಕ ವೀರಭದ್ರಪ್ಪ ಕುಂಬಾರ್ ಸೇರಿದಂತೆ ಡಜನ್ಗಟ್ಟಲೆ ಲೇಖಕರು ಕೇಂದ್ರ ಸಾಹಿತ್ಯ ಅಕಾಡೆಮಿ ಹಿಂತಿರುಗಿಸುವ ಹಿನ್ನೆಲೆಯಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಶುಕ್ರವಾರ ಸಭೆ ಸೇರುತ್ತಿದೆ. ಕರ್ನಾಟಕದ ಮತ್ತೊಬ್ಬ ಖ್ಯಾತ ಲೇಖಕ, ಜ್ಞಾನಪೀಠ ಪ್ರಶಸ್ತಿ ವಿಜೇತ ಬರಹಗಾರ ಡಾ. ಚಂದ್ರಶೇಖರ ಕಂಬಾರ ಈ ಅಕಾಡೆಮಿಯ ಉಪಾಧ್ಯಕ್ಷರಾಗಿದ್ದಾರೆ.
ಅಕಾಡೆಮಿ ಕರೆದಿರುವ ತುರ್ತು ಸಭೆಯ ಮೊದಲೇ, ಸೆಲ್ಯೂಟ್ ಟು ಪ್ರೊ.ಎಂಎಂ ಕಲಬುರ್ಗಿ ಎಂಬ ಬ್ಯಾನರ್ ಹಿಡಿದುಕೊಂಡು ನೂರಾರು ಲೇಖಕರು ನವದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಸೂಕ್ತ ಬೆಂಬಲ ದೊರೆಯದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸುವುದಾಗಿ ಲೇಖಕರು ತೀರ್ಮಾನಕ್ಕೆ ಬಂದಿದ್ದಾರೆ. [ಪ್ರಶಸ್ತಿ ಹಿಂದಿರುಗಿಸುತ್ತಿರುವ ನಾಡಿನ ಸಾಹಿತಿಗಳಿಗೆ 6 ಪ್ರಶ್ನೆಗಳು]

ಲೇಖಕರ ಮೇಲೆ ಆಗುತ್ತಿರುವ ದಾಳಿ ಮತ್ತು ತನ್ನ ನಿಲುವನ್ನು ಪ್ರಕಟಿಸದಿರುವುದನ್ನು ವಿರೋಧಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಕೆಲ ಸದಸ್ಯರು ಕೂಡ ಹೊರಬಂದಿದ್ದಾರೆ. ಈ ಎಲ್ಲ ಬೆಳವಣಿಗಳ ಕುರಿತು ಚರ್ಚಿಸುವ ಉದ್ದೇಶದಿಂದ ಅಕಾಡೆಮಿ ಸಭೆ ಸೇರುತ್ತಿದೆ.
ಆದರೆ, ಪ್ರಶಸ್ತಿ ಹಿಂತಿರುಗಿಸುವುದನ್ನು ವಿರೋಧಿಸಿರುವ ಅಕಾಡೆಮಿ, ಲೇಖಕರು ಪ್ರಶಸ್ತಿ ಹಿಂತಿರುಗಿಸಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಸರಕಾರದ ಅಡಿಯಲ್ಲಿ ಲೇಖಕರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿಲ್ಲ, ಲೇಖಕರ ಪ್ರತಿಭಟನೆ ಮಾಡಿ ಅನಗತ್ಯ ಹುಯಿಲೆಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. [ಕಲಬುರ್ಗಿ ಹತ್ಯೆ ಖಂಡಿಸಿ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದವರ ಪಟ್ಟಿ]
Delhi:Writers hold silent protest against MM Kalburgi's murder,growing intolerance,ahead of Akademi's emergency meet pic.twitter.com/I9sQoDclOZ
— ANI (@ANI_news) October 23, 2015 "ತಮ್ಮ ಅಭಿಪ್ರಾಯವನ್ನು ಅಭಿವ್ಯಕ್ತಪಡಿಸಿದ ಕೆಲ ಲೇಖಕರ ಹತ್ಯೆ ನಡೆದರೂ ಸಾಹಿತ್ಯ ಅಕಾಡೆಮಿ ಯಾವುದೇ ಕ್ರಮ ತೆಗೆದುಕೊಳ್ಳಲು ಮುಂದಾಗಿಲ್ಲ. ಅಕಾಡೆಮಿ ಈ ಬಾರಿ ಖಂಡಿತ ತಮ್ಮ ನಿಲುವನ್ನು ಪ್ರಕಟಿಸುತ್ತದೆ ಎಂಬ ನಂಬಿಕೆಯಿದೆ. ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದು ಅನಿವಾರ್ಯ" ಅಂದು 1988ರಲ್ಲಿ 'ದಿ ಗೋಲ್ಡನ್ ಗೇಟ್' ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗಳಿಸಿದ್ದ ಆಂಗ್ಲ ಲೇಖಕ ವಿಕ್ರಮ್ ಸೇಠ್ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications