ಲೋಕಸಭೆಯಲ್ಲಿ ಜೇಟ್ಲಿ ಸವಾಲು ಸ್ವೀಕರಿಸಿದ ಖರ್ಗೆ
Recommended Video

ನವದೆಹಲಿ, ಜನವರಿ 1: ಚಳಿಗಾಲದ ಸಂಸತ್ ಅಧಿವೇಶವನ್ನು ರಫೇಲ್ ಯುದ್ಧವಿಮಾನ ಖರೀದಿ ಪ್ರಕರಣ ನುಂಗಿ ಹಾಕಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಅಧಿವೇಶನದ ಕೊನೆಯ ವಾರದಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳು ರಫೇಲ್ ಸವಾಲು ಹಾಗೂ ಪ್ರತಿ ಸವಾಲು ಎದುರಿಸಲು ಸಿದ್ಧವಾಗಿವೆ.
ಚರ್ಚಿಸಿಲು ಕೇಂದ್ರ ಸರ್ಕಾರ ಸಿದ್ಧವಾಗಿದ್ದರೂ ಪ್ರತಿಪಕ್ಷಗಳು ಓಡಿಹೋಗುತ್ತಿವೆ ಎಂದು ಬಿಜೆಪಿ ಆರೋಪಿಸಿದರೆ ನಾವು ಚರ್ಚೆಗೆ ಸಿದ್ಧ ಸಮಯ ನಿಗದಿಪಡಿಸಿ ಎಂದು ಪ್ರತ್ಯುತ್ತರ ನೀಡಿದೆ. ಲೋಕಸಭೆಯಲ್ಲಿ ಸೋಮವಾರ ನಡೆದ ಚರ್ಚೆಯಲ್ಲಿ ರಫೇಲ್ ಕುರಿತ ಚರ್ಚೆಗೆ ಬನ್ನಿ ಓಡಿ ಹೋಗಬೇಡಿ ಎಂದು ಅರುಣ್ ಜೇಟ್ಲಿಯವರು ಸವಾಲೆಸೆದರು ಆ ಸವಾಲು ಸ್ವೀಕರಿಸಿರುವ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಚರ್ಚೆಗೆ ನಾವು ಸಿದ್ಧ ಜ.2ರಂದು ಸಮಯ ನಿಗದಿ ಮಾಡಿ ಎಂದು ಹೇಳಿದ್ದಾರೆ.
ರಫೇಲ್ ಒಪ್ಪಂದದ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಖರ್ಗೆ ಆಗ್ರಹಿಸಿದರು. ಇದಕ್ಕೆ ಪ್ರತಿಯಾಗಿ ಸಚಿವ ಜೇಟ್ಲಿ, ರಫೇಲ್ ಬಗ್ಗೆ ಚರ್ಚೆ ಆರಂಭಿಸಿ, ನಾವು ಉತ್ತರಕ್ಕೆ ಸಿದ್ಧರಿದ್ದೇವೆ. ಕಾಂಗ್ರೆಸ್ ಸುಳ್ಳು ಪ್ರಚಾರದಲ್ಲಿ ತೊಡಗಿದೆ ಎಂದು ನಿರೂಪಿಸುತ್ತೇವೆ, ಎಂದು ಜೇಟ್ಲಿ ಸವಾಲು ಎಸೆದರು. ಆಗ ಖರ್ಗೆ ಅವರು ಸವಾಲು ಒಪ್ಪಿರುವುದಾಗಿ ತಿಳಿಸಿದರು.

ಜೇಟ್ಲಿಯವರು ನಮಗೆ ಸವಾಲೆಸೆದಿದ್ದಾರೆ. ನಾವು ಒಪ್ಪಿಕೊಂಡಿದ್ದೇವೆ. ಜ.2 ರಂದು ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ದಯವಿಟ್ಟು ಸಮಯ ನಿಗದಿ ಮಾಡಿ."ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಸ್ಪೀಕರ್ಗೆ ತಿಳಿಸಿದ್ದಾರೆ.












Click it and Unblock the Notifications