ಕಮಲ್ ನಾಥ್ ಜತೆ ಕೋವಿಡ್ ಬಗ್ಗೆ ಡಿ.ಕೆ. ಶಿವಕುಮಾರ್ ಸಮಾಲೋಚನೆ
ನವದೆಹಲಿ, ಆಗಸ್ಟ್ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಕರ್ನಾಟಕ, ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೋವಿಡ್ ದುಸ್ಥಿತಿ ಕುರಿತು ಚರ್ಚೆ ನಡೆಸಿದರು.
ದೆಹಲಿ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಕಮಲ್ ನಾಥ್ ಅವರೊಂದಿಗೆ, ಉಭಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಪರಿಸ್ಥಿತಿಯ ಸತ್ಯಾಂಶ ಮುಚ್ಚಿಟ್ಟು, ಸುಳ್ಳು ಮಾಹಿತಿ ಮೂಲಕ ಜನರನ್ನು ದಾರಿತಪ್ಪಿಸುತ್ತಿರುವ ಬಗ್ಗೆ ಸಮಾಲೋಚನೆ ನಡೆಸಿದರು.
ಕೋವಿಡ್ ಸಾವಿನ ಪ್ರಮಾಣ ಕುರಿತು ಸರ್ಕಾರಗಳು ಸುಳ್ಳು ಲೆಕ್ಕ ನೀಡುತ್ತಿವೆ. ಸರ್ಕಾರ ಹೇಳುತ್ತಿರುವ ಅಂಕಿ-ಅಂಶಕ್ಕೂ ಚಿತಾಗಾರದಲ್ಲಿ ಅಂತ್ಯಸಂಸ್ಕಾರಗೊಂಡ ಶವಗಳ ಸಂಖ್ಯೆಗೂ ಅಜಗಜಾಂತರವಿದೆ. ಕೋವಿಡ್ ನಿಂದ ಸತ್ತವರ ಮಾಹಿತಿಯನ್ನು ಸ್ಮಶಾನ, ಚಿತಾಗಾರಗಳಿಂದ ಪಡೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶವನ್ನು ಶಿವಕುಮಾರ್ ಅವರು ಗಮನಕ್ಕೆ ತಂದರು.

ಬೆಂಗಳೂರು ಹಾಗೂ ಕರ್ನಾಟಕ ಮೆಡಿಕಲ್ ಟೂರಿಸಂ, ಐಟಿ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಆದರೆ ಬಿಜೆಪಿ ಸರ್ಕಾರಗಳು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿದ್ದು, ಜಾಗತಿಕ ಮಟ್ಟದಲ್ಲಿ ರಾಜ್ಯದ ಘನತೆ-ಗೌರವ ನಾಶವಾಗಿದೆ. ಕೆಲವು ದೇಶಗಳು ಇಲ್ಲಿಂದ ಹೋಗುವವರಿಗೆ ನಿರ್ಬಂಧ ಹೇರಿವೆ. ಇಲ್ಲಿನ ಸರ್ಕಾರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದರು.
ಕೋವಿಡ್ ಸಮಯದಲ್ಲಿ ಬಿಜೆಪಿಯ ಸ್ವಾರ್ಥ ರಾಜಕಾರಣ, ದುರಾಡಳಿತ, ಭ್ರಷ್ಟಾಚಾರದಿಂದ ರೈತರು, ಕಾರ್ಮಿಕರ ಬದುಕು ಬೀದಿಪಾಲಾಗಿದೆ. ಅವರಿಗೆ ಸರ್ಕಾರದಿಂದ ಸೂಕ್ತ ನೆರವು ಸಿಕ್ಕಿಲ್ಲ ಎಂದೂ ಹೇಳಿದರು.
ಸಂಕಷ್ಟದಲ್ಲಿರುವ ಜನರ ರಕ್ಷಣೆಗೆ ಕಾಂಗ್ರೆಸ್ ಯಾವ ರೀತಿ ಕಾರ್ಯಕ್ರಮ ವಿಸ್ತರಿಸಬಹುದು ಎಂಬ ವಿಚಾರವಾಗಿಯೂ ಉಭಯ ನಾಯಕರು ಚರ್ಚೆ ನಡೆಸಿದರು.
ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಅದರ ಪರಿಣಾಮ ಕಂಡುಬರುತ್ತಿದೆ. ನಿನ್ನೆಗಿಂತ ಇಂದು ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಗಡಿಗಳಲ್ಲಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1785 ಕೊರೊನಾ ಸೋಂಕು ಪತ್ತೆಯಾಗಿದ್ದು, 1651 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25 ಆಗಿದ್ದು, ಸಾವಿನ ಪ್ರಮಾಣ ಕೊಂಚ ಕಡಿಮೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 29,13,512ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ- 36,705 ಆಗಿದೆ. ಇಲ್ಲಿಯವರೆಗೆ ಒಟ್ಟು 28,52,368 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಶೇ. 1.10ಕ್ಕೆ ಇಳಿಕೆಯಾಗಿದ್ದು, ಕೋವಿಡ್ 19 ಡೆತ್ ರೇಟ್ ಶೇ.1.40ರಷ್ಟಾಗಿದೆ. ಇದು ನಿನ್ನೆಯ ವರದಿಗಿಂತ ಕಡಿಮೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ ಮಾಡಿದೆ.
ಸಾರ್ವಜನಿಕರಿಗೆ ಮನವಿ: ಕೋವಿಡ್- 19 ಸೋಂಕಿತ ವ್ಯಕ್ತಿಯೊಂದಿಗೆ ವೈಯಕ್ತಿಕ ಸಂಪರ್ಕ ಹೊಂದಿದ್ದಲ್ಲಿ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು ಹಾಗೂ ರೋಗ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳುವುದು ಅಥವಾ 14410 ಆಪ್ತಮಿತ್ರ ಆರೋಗ್ಯ ಸಹಾಯವಾಣಿಗೆ ಕರೆಮಾಡಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ ಮಧ್ಯಪ್ರದೇಶದಲ್ಲಿ 7.92 ಲಕ್ಷ ಪ್ರಕರಣಗಳಿದ್ದು, 10,513 ಮಂದಿ ಮೃತಪಟ್ಟಿದ್ದಾರೆ. 7.8 ಲಕ್ಷ ಮಂದಿ ಚೇತರಿಕೆ ಹೊಂದಿದ್ದಾರೆ. ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.43%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ











Click it and Unblock the Notifications