ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಇಂದು 11:30 ಕ್ಕೆ ಸಭೆ
ಇಂಧನ ಸಚಿವ ಡಿ ಕೆ ಶಿವಕುಮಾರ್ ಮತ್ತು ಎಸ್ ಆರ್ ಪಾಟೀಲ್ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಮಧ್ಯಾಹ್ನದೊಳಗೆ ಕೆಪಿಸಿಸಿ ಪಟ್ಟ ಯಾರ ಮುಡಿಗೇರಲಿದೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.
ನವದೆಹಲಿ, ಮೇ 29: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಿರುವ ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ನವದೆಹಲಿಯ ತುಘಲಕ್ ರಸ್ತೆಯಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ಮಹತ್ವದ ಸಭೆ ಸೇರಲಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿಬೆಳಿಗ್ಗೆ 11:30 ಸಭೆ ಆರಂಭವಾಗಲಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಂತಾದ ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.['ಬೀಫ್ ಫೆಸ್ಟ್', ಯುವ ಕಾಂಗ್ರೆಸ್ ನಡೆಗೆ ರಾಹುಲ್ ಕಿಡಿ]
ಇಂಧನ ಸಚಿವ ಡಿ ಕೆ ಶಿವಕುಮಾರ್ ಮತ್ತು ಎಸ್ ಆರ್ ಪಾಟೀಲ್ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಮಧ್ಯಾಹ್ನದೊಳಗೆ ಕೆಪಿಸಿಸಿ ಪಟ್ಟ ಯಾರ ಮುಡಿಗೇರಲಿದೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.
Comments
new delhi kpcc karnataka rahul gandhi siddaramaiah kc venugopal dk shivakumar ನವದೆಹಲಿ ಕೆಪಿಸಿಸಿ ರಾಹುಲ್ ಗಾಂಧಿ ಸಿದ್ದರಾಮಯ್ಯ ಕೆಸಿ ವೇಣುಗೋಪಾಲ್ ಡಿಕೆ ಶಿವಕುಮಾರ್
English summary
Karnataka Pradesh Congress Committee president's name will be finalised today in New Delhi. A meeting will be took place at Congress vice president Rahul Gandhi's residence today at 11:30 to decide name for KPCC president seat.
Story first published: Monday, May 29, 2017, 10:38 [IST]