ಆಲಮಟ್ಟಿ ಎತ್ತರ ಬದಲಾವಣೆ ಇಲ್ಲ: ನ್ಯಾಯಾಧೀಕರಣ
ನವದೆಹಲಿ, ನ. 29 : ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಜಯ ದೊರಕಿದೆ. ಆಲಮಟ್ಟಿ ಜಲಾಶಯದ ಅಣೆಕಟ್ಟೆಯನ್ನು 524 ಮೀಟರ್ಗೆ ಏರಿಸಿರುವುದನ್ನು ವಿರೋಧಿಸಿ ಆಂಧ್ರಪದೇಶ ಸಲ್ಲಿಸಿದ್ದ ಅರ್ಜಿಯನ್ನು ಕೃಷ್ಣಾ ನ್ಯಾಯಾಧೀಕರಣ ತಳ್ಳಿಹಾಕಿದೆ. ಆಲಮಟ್ಟಿ ಅಣೆಕಟ್ಟು ಎತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಧೀಕರಣ ಸ್ಪಷ್ಟಪಡಿಸಿದೆ.
ಕೃಷ್ಣಾ ಕೊಳ್ಳದ ನೀರು ಹಂಚಿಕೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ, ಮಹಾರಾಷ್ಟ್ರ ಸರ್ಕಾರಗಳು ಸಲ್ಲಿಸಿದ್ದ ಅರ್ಜಿಗಳು ಹಾಗೂ 10 ಅಂಶಗಳ ಕುರಿತಂತೆ ವಿವರಣೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ಕೃಷ್ಣಾ ನ್ಯಾಯಾಧೀಕರಣ ಶುಕ್ರವಾರ ತೀರ್ಪು ನೀಡಿದೆ. (ಕೃಷ್ಣಾ ನ್ಯಾಯಾಧೀಕರಣ ತೀರ್ಪಿಗೆ ಆಂಧ್ರ ಕ್ಯಾತೆ)

ನ್ಯಾಯಮೂರ್ತಿ ಬೃಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧೀಕರಣ 2010ರ ಡಿಸೆಂಬರ್ 30 ರಂದು ನೀಡಿದ್ದ ತೀರ್ಪಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ತಕರಾರು ಅರ್ಜಿ ಸಲ್ಲಿಸಿದ್ದವು. ಅರ್ಜಿಯಲ್ಲಿ ಆಲಮಟ್ಟಿ ಅಣೆಕಟ್ಟೆಯಲ್ಲಿ 524.26 ಮೀಟರ್ ಎತ್ತರಕ್ಕೆ ನೀರು ಶೇಖರಿಸಿದರೆ, ನಾಗಾರ್ಜುನ ಸಾಗರ, ಶ್ರೀಶೈಲಂ ಅಣೆಕಟ್ಟೆಗಳಿಗೆ ನೀರಿನ ಹರಿವು ಕಡಿಮೆಯಾಗಲಿದೆ ಎಂಬುದು ಆಂಧ್ರದ ಆರೋಪವಾಗಿತ್ತು.
ಇದೇ ವೇಳೆ ಆಂಧ್ರಪ್ರದೇಶದ ರಾಜೊಳ್ಳಿ ಬಂಡಾ ನಾಲೆಗೆ ತುಂಗಭದ್ರಾ ಡ್ಯಾಂನಿಂದ 4 ಟಿಎಂಸಿ ನೀರು ನೀಡಬೇಕು ಎಂದು ನ್ಯಾಯಾಧೀಕರಣ ಆದೇಶ ನೀಡಿದೆ. ಹಂಚಿಕೆಯಾಗದ 513 ಟಿಎಂಸಿ ನೀರಿನ ಹಂಚಿಕೆ ಕೋರಿ ಕೃಷ್ಣ ನ್ಯಾಯಾಧೀಕರಣದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು ಎಂದು ಬ್ರಿಜೇಶ್ ಕುಮಾರ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಕರ್ನಾಟಕ ಸಂತಸ : ಕೃಷ್ಣ ನ್ಯಾಯಾಧೀಕರಣದ ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ನವದೆಹಲಿಯಲ್ಲಿ ಹಾಜರಿದ್ದರು. ತೀರ್ಪನ್ನು ಸ್ವಾಗತಿಸಿರುವು ಅವರು, ಉತ್ತರ ಕರ್ನಾಟಕ ಜನತೆಯ ಪಾಲಿಗೆ ಇದೊಂದು ಐತಿಹಾಸಿಕ ದಿನ ಎಂದು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications