ಲಮೋರನ್ನು ಪ್ರಿಯಾಂಕಾ, ರಾಬರ್ಟ್ ಭೇಟಿಯಾಗಿಲ್ಲ: ಕಾಂಗ್ರೆಸ್
ನವದೆಹಲಿ, ಜೂ.26: ಐಪಿಎಲ್ ಹಗರಣದ ಆರೋಪಿ ಮಾಜಿ ಚೇರ್ಮನ್ ಲಲಿತ್ ಮೋದಿ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಪುತ್ರಿ ಹಾಗೂ ಅಳಿಯನನ್ನು ಲಂಡನ್ನಿನಲ್ಲಿ ಭೇಟಿ ಮಾಡಿದ್ದೆ ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಪ್ರಿಯಾಂಕಾ ಗಾಂಧಿಯಾಗಲಿ ರಾಬರ್ಟ್ ವದ್ರಾ ಆಗಲಿ ಲಲಿತ್ ಮೋದಿ ಅವರನ್ನು ಭೇಟಿ ಮಾಡುವ ಪ್ರಮೇಯವೇ ಇಲ್ಲ. ಲಲಿತ್ ಮೋದಿ ಪರಿಚಯವಿದ್ದ ಮಾತ್ರಕ್ಕೆ ಎಲ್ಲರನ್ನು ಆರೋಪಿಗಳೆಂದು ಹೇಳಲು ಬರುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ. [ಲಲಿತ್ ಮೋದಿಗೆ 'ಇಡಿ' ಕಟಂಕ]
ಯುಪಿಎ ಅಧಿಕಾರ ಅವಧಿಯಲ್ಲಿ ಲಂಡನ್ನಿನ ಟಿಮ್ಮೆ ಸರ್ನಾ ಜೊತೆಯಲ್ಲಿ ಪ್ರಿಯಾಂಕ ಗಾಂಧಿ ಹಾಗೂ ಅವರ ಪತಿ ವಾದ್ರಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದೆ ಎಂದು ಲಲಿತ್ ಮೋದಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದರು. ಟಿಮ್ಮಿ ಬಳಿ ನನ್ನ ಫೋನ್ ನಂಬರ್ ಇದೆ. ಅವರು ನನಗೆ ಕರೆ ಮಾಡಬಹುದು ಎಂದಿದ್ದರು. [ಬಿಜೆಪಿಯ ನಾಲ್ಕು ಘಟವಾಣಿಯರು]

1/3 Happy to meet the Gandhi Family http://t.co/43iiC6mL9w in London. I had run into Robert and Priyanka separately pic.twitter.com/JTnaE6eX1A
— Lalit Kumar Modi (@LalitKModi) June 25, 2015 ಇನ್ನು ಕೆಲವರು ದೇಶದಿಂದ ಪಲಾಯನಗೈದಿರುವ ಲಲಿತ್ ಮೋದಿ ಅವರನ್ನು ಭೇಟಿ ಮಾಡುವುದು ಮಹಾಪರಾಧ ಎನ್ನುವ ರಾಷ್ಟ್ರೀಯ ಸುದ್ದಿ ವಾಹಿನಿಗಳು ಈಗ ಸೋನಿಯಾ ಕುಟುಂಬಸ್ಥರ ರಾಜೀನಾಮೆ ಕೇಳುವ ಧೈರ್ಯ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಅದರೆ, ಲಲಿತ್ ಮೋದಿಗೆ ಯಾವುದೇ ರೀತಿ ನೆರವು ನೀಡಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications