Get Updates
Get notified of breaking news, exclusive insights, and must-see stories!

''ಗೌಪ್ಯತೆ ವಿಚಾರದಲ್ಲಿ ಸುಪ್ರೀಂ ಹೇಳಿದ್ದನ್ನೇ ಹಿಂದೆ ಕೇಂದ್ರ ಹೇಳಿತ್ತು!''

ಗೌಪ್ಯತೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಈ ಹಿಂದೆ ಕೇಂದ್ರ ಸರ್ಕಾರವೇ ಹೇಳಿತ್ತು. ನಾಗರಿಕರ ಮಾಹಿತಿಯ ಗೌಪ್ಯತೆ ಬಗ್ಗೆ ಹಿಂದೆಯೇ ಮೋದಿ ಸರ್ಕಾರ ಮಾನ್ಯತೆ ನೀಡಿತ್ತು. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿಕೆ.

ನವದೆಹಲಿ, ಆಗಸ್ಟ್ 24: ಮಾಹಿತಿ ಗೌಪ್ಯತೆಯು ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಹೇಳಿತ್ತು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಗುರುವಾರ (ಆಗಸ್ಟ್ 24), ಮಾಹಿತಿ ಗೌಪ್ಯತೆಯ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ತನ್ನ ವೈಯಕ್ತಿಕ ಮಾಹಿತಿಯನ್ನು ಗೌಪ್ಯವಾಗಿಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದೆ.

Law Minister Ravi Shankar Prasad On Court Verdict On Right To Privacy

ಗುರುವಾರ ಮಧ್ಯಾಹ್ನ ನಡೆಸಲಾದ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ರವಿಶಂಕರ್, ''ಕೆಲ ಮಾಧ್ಯಮಗಳಲ್ಲಿ ಈ ಸುದ್ದಿಯನ್ನು ಕೇಂದ್ರ ಸರ್ಕಾರಕ್ಕೆ ಮುಖಭಂಗವೆಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಆದರೆ, ಪ್ರತಿಯೊಬ್ಬ ನಾಗರಿಕನ ಮಾಹಿತಿಯನ್ನು ಗೌಪ್ಯವಾಗಿಟ್ಟುಕೊಳ್ಳುವುದು ಆಯಾ ನಾಗರಿಕನ ಮೂಲಭೂತ ಹಕ್ಕು ಎಂದು ಈ ಮೊದಲೇ ಕೇಂದ್ರ ಸರ್ಕಾರ ಘೋಷಿಸಿತ್ತು. ಅದನ್ನೇ ಈಗ ಸುಪ್ರೀಂ ಕೋರ್ಟ್ ಪುನರುಚ್ಛರಿಸಿದಂತೆ ಆಗಿದೆ'' ಎಂದರು.

ಭಾರತೀಯ ಸಂವಿಧಾನದ 21ನೇ ಪರಿಚ್ಛೇದದಲ್ಲಿ ಪ್ರಜೆಗಳ ಸ್ವಾತಂತ್ರ್ಯದ ಬಗ್ಗೆ ಹೇಳುವಾಗ ಅವರ ಬಗೆಗಿನ ಮಾಹಿತಿಯ ಹಕ್ಕಿನ ಬಗ್ಗೆಯೂ ಹೇಳಲಾಗಿದೆ. ಇದನ್ನೇ ಈಗ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು 547 ಪುಟಗಳ ತೀರ್ಪಿನಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+