ನಿರ್ಭಯಾ ನಡತೆ ಬಗ್ಗೆಯೇ ಪ್ರಶ್ನಿಸಿದ ಹಂತಕರ ಪರ ವಕೀಲ
ನವ ದೆಹಲಿ ಮಾರ್ಚ್ 20: 2012 ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿನ ಬಗ್ಗೆ ಹಂತಕ ಪರ ವಕೀಲ ಅಜಯ್ ಪ್ರಕಾಶ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ವಕೀಲ ಎ ಪಿ ಸಿಂಗ್ ನಾಲ್ಕು ಹಂತಕರನ್ನು ಬಚಾವ್ ಮಾಡಲು ಏನೇನೋ ತಂತ್ರಗಳನ್ನು ರೂಪಿಸಿದರು. ಆದರೆ, ಹಂತಕರು ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಆಗಲಿಲ್ಲ. ಇತ್ತ ಕೇಸ್ ಸೋತ ಬೇಸರದಲ್ಲಿ ಮಾತನಾಡಿದ ವಕೀಲ ಎಂ ಪಿ ಸಿಂಗ್ ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.
ಅಪರಾಧಿ ಪವನ್ ತಾಯಿಯ ಭೇಟಿಗೆ ಅವಕಾಶ ನೀಡಲಿಲ್ಲ. ಈ ಬಗ್ಗೆ ಮಾತನಾಡುವ ವೇಳೆ ನಿರ್ಭಯಾ ನಡತೆ ಬಗ್ಗೆಯೇ ವಕೀಲ ಎಂ ಪಿ ಸಿಂಗ್ ಪ್ರಶ್ನೆ ಮಾಡಿದ್ದಾರೆ. ಎ ಪಿ ಸಿಂಗ್ ಹೇಳಿಕೆಗೆ ಸ್ಥಳದಲ್ಲಿಯೇ ವಿರೋಧ ವ್ಯಕ್ತವಾಯಿತು. ಅಲ್ಲಿಯೇ ಇದ್ದ ಮಹಿಳೆ ಎಂ ಪಿ ಸಿಂಗ್ ವಿರುದ್ಧ ಸಿಡಿದೆದ್ದರು.

ನಿರ್ಭಯಾ ನಡತೆ ಬಗ್ಗೆ ಪ್ರಶ್ನೆ
ವಕೀಲ ಎ ಪಿ ಸಿಂಗ್ ನಿರ್ಭಯಾ ಕೇಸ್ ತೀರ್ಪಿನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ನಿರ್ಭಯಾ ನಡತೆ ಬಗ್ಗೆಯೇ ಪ್ರಶ್ನೆ ಮಾಡಿದ್ದಾರೆ. ಎ ಪಿ ಸಿಂಗ್ ಹಂತಕರ ಪರ ವಾದ ಮಂಡಿಸಿದ್ದು, ಕೇಸ್ ತಮ್ಮ ಕೈ ಮೀರಿ ಹೋಗಿತ್ತು. ಕೇಸ್ ಸೋತ ನಂತರ, ಆಕ್ರೋಶದಿಂದಲೇ ಮಾತನಾಡಿದ ಅವರು, ಈ ಘಟನೆಯಲ್ಲಿ ನಿರ್ಭಯಾರದ್ದು ಕೂಡ ತಪ್ಪು ಇದೆ ಎನ್ನುವಂತೆ ಹೇಳಿಕೆ ನೀಡಿದ್ದಾರೆ.

ರಾತ್ರಿ ಎಲ್ಲಿಗೆ, ಯಾರ ಜೊತೆ ಹೋಗಿದ್ದರು?
ಅಪರಾಧಿ ಪವನ್ ಗುಪ್ತಾ ತಾಯಿ ಪರ ಎ ಪಿ ಸಿಂಗ್ ಮಾತನಾಡುವ ವೇಳೆ ಪತ್ರಕರ್ತರೊಬ್ಬರು ನಿರ್ಭಯಾ ತಾಯಿ ಬೆಂಬಲಕ್ಕೆ ನಿಂತರು. ಆಗ ''ಆಕೆ (ನಿರ್ಭಯಾ) ಅಂದು ಏಕೆ ಅಷ್ಟು ರಾತ್ರಿಯಲ್ಲಿ ಹೊರಗೆ ಹೊಗಿದ್ದರು, ಯಾರ ಜೊತೆಗೆ ಹೊಗಿದ್ದರು. ಇದು ಯಾಕೆ ಅವರ ತಾಯಿಗೆ ತಿಳಿದಿಲ್ಲ. ಇದನ್ನು ಹೋಗಿ ಪ್ರಶ್ನೆ ಮಾಡಿ.'' ಎಂದು ವಕೀಲ ಎಂ ಪಿ ಸಿಂಗ್ ವಿವಾದ ಹುಟ್ಟಿಸುವ ಹೇಳಿಕೆ ನೀಡಿದ್ದಾರೆ.

ಈ ತಾಯಿ ನೋವು ಸಹ ಅರ್ಥ ಮಾಡಿಕೊಳ್ಳಬೇಕು
ಅಪರಾಧಿ ಪವನ್ ತಾಯಿಗೆ ಮಗನ ಭೇಟಿಗೆ ಅವಕಾಶ ನೀಡಲಿಲ್ಲ. ''ಆಕೆ ವಿಕಲಚೇತನರಾಗಿದ್ದು ಪುತ್ರನ ಭೇಟಿಗಾಗಿ ಕಾದಿದ್ದರು. ಒಬ್ಬ ತಾಯಿಯ ನೋವನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಒಬ್ಬ ತಾಯಿ (ನಿರ್ಭಯಾ ತಾಯಿ) ಹಿಂದೆ ಎಲ್ಲರೂ ಓಡುತ್ತಿದ್ದಾರೆ. ಹಾಗಾದರೆ ಪವನ್ ತಾಯಿಗೆ ಯಾವುದೇ ಬೆಲೆ ಇಲ್ವಾ?'' ಎಂದು ಎ ಪಿ ಸಿಂಗ್ ಪ್ರಶ್ನಿಸಿದ್ದಾರೆ.

ವಿವಾದ ಸೃಷ್ಟಿಸುವ ಹೇಳಿಕೆ
ಅಪರಾಧಿಗಳಾದ ಪವನ್ ಗುಪ್ತಾ ಅಕ್ಷಯ್, ಮುಖೇಶ್ ಕುಟುಂಬ ಭೇಟಿಗೆ ಎಂ ಪಿ ಸಿಂಗ್ ಪ್ರಯತ್ನಪಟ್ಟರು. ಆದರೆ, ಅದು ಸಾಧ್ಯ ಆಗಲಿಲ್ಲ. ಹೀಗಾಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಿರ್ಭಾಯ ತಾಯಿಯ ನೋವು ಅರ್ಥ ಮಾಡಿಕೊಳ್ಳುವವರಿಗೆ, ಪವನ್ ತಾಯಿ ನೋವು ಏಕೆ ಅರ್ಥ ಆಗುತ್ತಿಲ್ಲ ಎಂದರು. ಈ ವೇಳೆ ನಿರ್ಭಯಾ ನಡತೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಈ ಹೇಳಿಕೆ ವಿವಾದ ಹುಟ್ಟಿಸಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications