ಅತ್ಯಾಚಾರಿಗಳಿಗೆ ಗಲ್ಲು: ನಿರ್ಭಯಾ ಹಂತಕರ ಪರ ವಕೀಲ ಎಪಿ ಸಿಂಗ್ ಪ್ರತಿಕ್ರಿಯೆ
ನವದೆಹಲಿ, ಮಾರ್ಚ್ 20: ನಿರ್ಭಯಾ ಹಂತಕರನ್ನು ಮಾರ್ಚ್ 20ರಂದು ಬೆಳಗ್ಗೆ ಗಲ್ಲಿಗೇರಿಸಲಾಗಿದೆ. ಈ ಕುರಿತಂತೆ ಅಪರಾಧಿಗಳ ವಕೀಲರಾಗಿದ್ದ ಎಪಿ ಸಿಂಗ್ ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಸಂವಿಧಾನ ಅನುಗುಣವಾಗಿ ಎಲ್ಲ ಕಾರ್ಯಗಳು ನಡೆಬೇಕಿತ್ತು. ಹಾಗಾಗಿ ರಾತ್ರಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮುಂದೆ ಹೋಗಿ ಜೀವ ಉಳಿಸಲು ಪ್ರಯತ್ನಿಸಿದ್ದೇನೆ ಎಂದರು.
ಇಂದು ಬೆಳಗ್ಗೆ 5.30ಕ್ಕೆ ಮ್ಯಾಜಿಸ್ಟ್ರೇಟ್ ಎದುರು ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ.
ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಎಲ್ಲ ಕಾನೂನು ತಂತ್ರಗಳು ನಡೆಸಿ ಕೊನೆಗೆ ಶುಕ್ರವಾರ ಬೆಳಗ್ಗೆ ಸುಮಾರು 5.30ಕ್ಕೆ ದಿಲ್ಲಿಯ ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಕೊರಳೊಡ್ಡಿದರು.
ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಅವರ ಕುಟುಂಬಸ್ತರಿಗೆ ಹಸ್ತಾಂತರಿಸುವ ಮೊದಲು ಲಿಖಿತ ಸ್ಪಷ್ಟನೆಯನ್ನು ಪಡೆದುಕೊಳ್ಳಲಾಗುತ್ತದೆ.
ಮೃತದೇಹಗಳನ್ನು ಮಣ್ಣು ಮಾಡುವ ಸಂದರ್ಭ ಸಾರ್ವಜನಿಕ ಪ್ರದರ್ಶನಕ್ಕಿಡುವುದಿಲ್ಲ ಎಂಬ ಸ್ಪಷ್ಟನೆಯನ್ನು ಲಿಖಿತ ರೂಪದಲ್ಲಿ ನಾಲ್ಕು ಮನೆಯವರು ನೀಡಬೇಕು.

ಅಕ್ಷಯ್ ನನ್ನು ನೋಡಲು ಪುತ್ರನಿಗೆ ಅವಕಾಶ ನೀಡಬೇಕಿತ್ತು
ನ್ಯಾಯಾಲಯದ ಮುಂದೆ ನಾನು ಹೊಸ ವಾದವನ್ನೇ ಮಂಡಿಸಿದ್ದೇನೆ. ದೋಷಿ ಅಕ್ಷಯ್ ನನ್ನು ನೋಡಲು ಅವರ ಪುತ್ರ ಕಾಣಲು ಬಿಹಾರದಿಂದ ಬಂದಿದ್ದಾನೆ. ತಂದೆಯ ಭೇಟಿಗೆ ಅವಕಾಶ ನೀಡಬೇಕಿತ್ತು.

ಅಕ್ಷಯ್ ಕುಟುಂಬ ನಕ್ಸಲ್ ಪ್ರದೇಶದಲ್ಲಿದೆ
ಮುಖೇಶ್ ಕುಟುಂಬಸ್ಥರು ದೆಹಲಿಯ ನಿವಾಸಿಗಳು. ಆದರೆ ಅಕ್ಷಯ್ ಕುಟುಂಬ ಬಿಹಾರನ ನಕ್ಸಲ್ ಪೀಡಿತ ಪ್ರದೇಶದಲ್ಲಿದೆ. ಎಂಟು ವರ್ಷದ ಮಗನಿಗೆ ತಂದೆಯನ್ನ ನೋಡುವ ಅವಕಾಶ ಸಿಗಲಿಲ್ಲ.

ಇದು ಇತಿಹಾಸದಲ್ಲಿ ಇರಲಿದೆ
ಒಂದು ಮಗ ತಂದೆಯನ್ನ ನೋಡಿದ್ರೆ ಏನು ಆಗುತ್ತಿತ್ತು. ಮಗನಿಗೆ ತಂದೆಯ ಭೇಟಿಗೆ ಅವಕಾಶ ನೀಡದಿರೋದು ಇತಿಹಾಸದಲ್ಲಿ ಇರಲಿದೆ. ಇಂದು ಬಾಲ ವಿಕಾಸ ಇಲಾಖೆಗೆ ನಾಚಿಕೆ ಆಗಬೇಕು.

ಭೇಟಿ ಮಾಡಲು ಕೊರೊನಾ ನೆಪವೊಡ್ಡಿದ್ದರು
ನಿನ್ನೆ ಹೋದರೆ ಕೊರೊನಾ ಎಂದು ಹೇಳಿದರು. ಇಂದು ಕೋರ್ಟ್ ನತ್ತ ತಿರುಗಾಡುವ ಕೆಲಸವೇ ಆಯ್ತು. ಪವನ್ ತಾಯಿ ವಿಕಲಚೇತನರಾಗಿದ್ದು ಪುತ್ರನ ಭೇಟಿಗಾಗಿ ಕಾದಿದ್ದರು ಒಬ್ಬ ತಾಯಿಯ ನೋವನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಒಬ್ಬ ತಾಯಿ ಹಿಂದೆ ಎಲ್ಲರೂ ಓಡುತ್ತಿದ್ದಾರೆ. ಹಾಗಾದರೆ ಪವನ್ ತಾಯಿಗೆ ಯಾವುದೇ ಬೆಲೆ ಇಲ್ವಾ? ಎಂದು ಎಪಿ ಸಿಂಗ್ ಪ್ರಶ್ನಿಸಿದ್ದಾರೆ.

ಅಕ್ಷಯ್ ಪುತ್ರನ ತಪ್ಪೇನಿದೆ
ಅಕ್ಷಯ್ ನನ್ನು ನೀವು ಬಲತ್ಕಾರಿ, ಹಂತಕ ಎಂದು ಹೇಳುತ್ತೀರಿ. ಇಲ್ಲಿ ಆತನ ಪುತ್ರನ ತಪ್ಪೇನಿದೆ. ಮುಂದೊಂದು ದಿನ ಅಕ್ಷಯ್ ಪುತ್ರ ದೊಡ್ಡವನಾಗಿ ಸಂವಿಧಾನ ಓದಿದರೆ, ಈ ವ್ಯವಸ್ಥೆ, ಜೈಲು ನಿಯಮ, ಮಾಧ್ಯಮ ತಂದೆಯ ಭೇಟಿಗೆ ಅವಕಾಶ ಕಲ್ಪಿಸಲಿಲ್ಲ ಎಂಬ ಭಾವನೆ ಮೂಡುತ್ತದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications