ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರದ್ಯಮ್ನ ಕೊಲೆ ಆರೋಪಿಯ ರಕ್ಷಣೆಗೆ ನಿಂತ 'ತಲ್ವಾರ್' ವಕೀಲ!

|
Google Oneindia Kannada News

ನವದೆಹಲಿ, ನವೆಂಬರ್ 25: ರಾಯನ್ ಇಂಟರ್ನಾಶನಲ್ ಶಾಲೆಯಲ್ಲಿ ನಡೆದ ಪ್ರದ್ಯುಮ್ನ ಠಾಕೂರ್ ಹತ್ಯೆಗೆ ಸಂಬಂಧಿಸಿದಂತೆ, ಆರೋಪಿ 11ನೇ ತರಗತಿ ವಿದ್ಯಾರ್ಥಿಯ ಪರ ಆರುಷಿ ಪ್ರಕರಣದಲ್ಲಿ ಆಕೆಯ ತಂದೆ-ತಾಯಿ ಪರವಾಗಿ ವಾದ ಮಾಡಿದ್ದ ವಕೀಲರೇ ವಾದ ಮಂಡಿಸಲಿದ್ದಾರೆ!

ತನ್ವೀರ್ ಅಹ್ಮದ್ ಮಿರ್ ಎಂಬ ವಕೀಲರು ಹನ್ನೊಂದನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಪರವಾಗಿ ತಾನು ವಾದ ಮಂಡಿಸುವುದಾಗಿ ಖಚಿತಪಡಿಸಿದ್ದಾರೆ.

ಪ್ರದ್ಯುಮ್ನ ಠಾಕೂರ್ ಹತ್ಯೆಯ ಬೆಚ್ಚಿ ಬೀಳಿಸುವ ವಿವರಗಳುಪ್ರದ್ಯುಮ್ನ ಠಾಕೂರ್ ಹತ್ಯೆಯ ಬೆಚ್ಚಿ ಬೀಳಿಸುವ ವಿವರಗಳು

ಸೆಪ್ಟೆಂಬರ್ 8ರಂದು ಗುರ್ಗಾಂವ್ ರಾಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಪ್ರದ್ಯುಮ್ನ ಠಾಕೂರ್ ನನ್ನು ಆತನ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿ ಸಾಯಿಸಲಾಗಿತ್ತು. ಮೇಲ್ನೋಟಕ್ಕೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿತ್ತು. ಆದರೆ ವೈದ್ಯಕೀಯ ಪರೀಕ್ಷೆಯ ನಂತರ ಬಾಲಕನ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಬುದು ಸಾಬೀತಾಗಿತ್ತು.

Lawyer of Aarushi Talwar case will defend teen accused of Pradyumn murder case

ಘಟನೆಯ ನಂತರ ಶಾಲಾ ಬಸ್ ಕಂಡಕ್ಟರ್ ಅಶೋಕ್ ನನ್ನೇ ಪೊಲೀಸರು ತಪ್ಪಿತಸ್ಥ ಎಂದು ಅನುಮಾನಿಸಿದ್ದರು. ಆದರೆ ಯಾಕೋ ಘಟನೆಯಲ್ಲಿ ಏನೋ ನಿಗೂಢತೆ ಇದೆ ಎಂಬ ಅನುಮಾನ ಕಾಡುತ್ತಿದ್ದಂತೆಯೇ ಪ್ರದ್ಯುಮ್ನನ ತಂದೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ ನಂತರ ಪ್ರಕರಣ ಬೇರೆಯದೇ ರೂಪ ಪಡೆದಿತ್ತು.

ಪ್ರದ್ಯುಮ್ನ ಹತ್ಯೆ ಪ್ರಕರಣಕ್ಕೆ ಮತ್ತೆ ಹೊಸ ತಿರುವು!ಪ್ರದ್ಯುಮ್ನ ಹತ್ಯೆ ಪ್ರಕರಣಕ್ಕೆ ಮತ್ತೆ ಹೊಸ ತಿರುವು!

ತನಿಖೆ ನಡೆಸಿದ ಸಿಬಿಐ, ಈ ಪ್ರಕರಣದಲ್ಲಿ ಕಂಡಕ್ಟರ್ ನ ಕೈವಾಡವೇನೂ ಇಲ್ಲ. ಬದಲಾಗಿ ಅದೇ ಶಾಲೆಯಲ್ಲಿ ಓದುತ್ತಿದ್ದ ಹನ್ನೊಂದನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಪ್ರದ್ಯಮ್ನನ ಕೊಲೆ ಮಾಡಿದ್ದಾನೆಂಬ ಅನುಮಾನ ವ್ಯಕ್ತಪಡಿಸಿತ್ತು.

English summary
Tanveer Ahmed Mir, a lawyer who defended Rajesh and Nupur Talwar in their daughter Aarushi's murder case, will now ready to defend teen accused of killing 7 year old student of Ryan International school Pradyumn.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X