ಭಾರತ ಉಸಿರುಗಟ್ಟಿಸುವಂತಿದ್ದರೆ, ಬಿಟ್ಟು ತೊಲಗಿ ಎಂದ ಆರ್ಎಸ್ಎಸ್
ನವದೆಹಲಿ, ಡಿಸೆಂಬರ್ 07: ''ಭಾರತ ಉಸಿರುಗಟ್ಟಿಸುವಂತಿದ್ದರೆ ದೇಶ ಬಿಟ್ಟು ತೊಲಗಿ'' ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾಗೆ ಆರ್ಎಸ್ಎಸ್ ಹೇಳಿದೆ.
ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ಪ್ರತಿಭಟನೆ ನಡೆಸಬೇಕು, ತ್ಯಾಗ ಮಾಡಬೇಕು ಎಂಬ ಫಾರೂಖ್ ಹೇಳಿಕೆಗೆ ಆರ್ಎಸ್ಎಸ್ ಅಸಮಾಧಾನ ವ್ಯಕ್ತಪಡಿಸಿದೆ.
ಅಬ್ದುಲ್ಲಾ ಅವರು ''ಭಾರತದಲ್ಲಿ ಉಸಿರುಗಟ್ಟಿಸುವಂತಹ ವಾತಾವರಣ ಇದೆ ಎಂದು ಭಾವಿಸಿದರೆ ಪ್ರಪಂಚದ ಯಾವುದೇ ಭಾಗದಲ್ಲಿ ಅವರು ವಾಸಿಸಬಹುದು. ದೇಶ ತೊರೆದು ಬೇರೆ ದೇಶದಲ್ಲಿ ವಾಸ ಮಾಡಬಹುದು'' ಎಂದು ವ್ಯಂಗ್ಯಮಿಶ್ರಿತ ಸಲಹೆಯನ್ನು ಇಂದ್ರೇಶ್ ಕುಮಾರ್ ನೀಡಿದ್ದಾರೆ.

ಜಮ್ಮುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ಎಸ್ಎಸ್ ಹಿರಿಯ ನಾಯಕ ಇಂದ್ರೇಶ್ ಕುಮಾರ್, ಫಾರೂಖ್ ಅಬ್ದುಲ್ಲಾ ಹಿಂಸೆಯನ್ನು ಪ್ರೀತಿಸುತ್ತಾರೆ, ಶಾಂತಿಯನ್ನಲ್ಲ ಎಂಬುದು ಅವರ ಹೇಳಿಕೆಯಿಂದ ಗೊತ್ತಾಗುತ್ತದೆ.
ಜಮ್ಮು ಮತ್ತು ಕಾಶ್ಮೀರದ ಇಬ್ಬರೂ ನಾಯಕರು ಪ್ರಚೋದನಾತ್ಮಕ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಅವರ ಪ್ರಚೋದನಕಾರಿ ಹೇಳಿಕೆಗಳು ಅಡ್ಡಿಯಾಗುತ್ತವೆ ಎಂದು ಇಂದ್ರೇಶ್ ಕುಮಾರ್ ಮೆಹಬೂಬಾ ಮುಫ್ತಿ ವಿರುದ್ಧವೂ ಕಿಡಿಕಾರಿದರು.
ಭಾನುವಾರ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ 116ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶ್ರೀನಗರದ ನಸೀಂಬಾಗ್ನಲ್ಲಿರುವ ಸಮಾಧಿಯ ಬಳಿ ನ್ಯಾಷನಲ್ ಕಾನ್ಫರೆನ್ಸ್ ಯುವ ವಿಭಾಗದ ಸಮಾವೇಶ ಉದ್ದೇಶಿಸಿ ಮಾತನಾಡಿದ ಫಾರೂಖ್ ಅಬ್ದುಲ್ಲಾ ಈ ರೀತಿಯ ಹೇಳಿಕೆ ನೀಡಿದ್ದರು.
ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಮರು ಪಡೆಯಲು ಚೀನಾದ ನೆರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಫಾರೂಕ್ ಅಬ್ದುಲ್ಲಾ ಈ ಹಿಂದೆ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಇಂದ್ರೇಶ್ ಕುಮಾರ್, ಇದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ.
ಅವರು ಭಾರತದಲ್ಲಿರಲು ಇಷ್ಟ ಪಡದಿದ್ದರೆ, ಬೇರೆ ಎಲ್ಲಿ ಬೇಕಾದರೂ ವಾಸ ಮಾಡಬಹುದು. ಅರಬ್ ಅಥವಾ ಅಮೆರಿಕ ಅಥವಾ ಅವರ ಪತ್ನಿ ವಾಸ ಮಾಡುತ್ತಿರುವ ಇಂಗ್ಲೆಂಡ್ಗೆ ತೆರಳಿಯೂ ವಾಸ ಮಾಡಲು ಯೋಚನೆ ಮಾಡಬಹುದು ಎಂದರು.
ಸ್ವಲ್ಪ ದಿನಗಳ ಹಿಂದಷ್ಟೇ ನನ್ನನ್ನು ಹತ್ಯೆ ಮಾಡಿದರೂ ಕಾಶ್ಮೀರವು ಪಾಕಿಸ್ತಾನದ ಭಾಗವಾಗಿರುವುದಿಲ್ಲ ಎಂದು ಫಾರೂಖ್ ಅಬ್ದುಲ್ಲಾ ಹೇಳಿದ್ದರು.
ಅಕ್ಟೋಬರ್ 7 ರಂದು ಗುರುದ್ವಾರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಈದ್ಗಾದಲ್ಲಿರುವ ಸರ್ಕಾರಿ ಶಾಲೆಯ ಪ್ರಾಂಶುಪಾಲ ಸುಪಿಂದರ್ ಕೌರ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದ ಅಬ್ದುಲ್ಲಾ, ಕಾಶ್ಮೀರದ ಜನರು ಧೈರ್ಯದಿಂದ ಇರಬೇಕು ಮತ್ತು ಒಗ್ಗಟ್ಟಾಗಿ ಕೊಲೆಗಾರರ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು.
ನಾವು ಈ ಮೃಗಗಳ ವಿರುದ್ಧ ಹೋರಾಡಬೇಕು, ಏನೇ ಬಂದರೂ ನಾವು ಭಾರತದ ಭಾಗವಾಗಿರಬೇಕು, ಅವರು ನನ್ನನ್ನು ಶೂಟ್ ಮಾಡಿ ಕೊಂದರೂ ಈ ನಿರ್ಧಾರ ಬದಲಾಗಬಾರದು ಎಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಕೌರ್ ಹತ್ಯೆಗೆ ದುಃಖ ವ್ಯಕ್ತಪಡಿಸಿದ ಅವರು 1990ರಲ್ಲಿ ಭಯದಿಂದ ಎಲ್ಲರಬ ಕಣಿವೆ ರಾಜ್ಯವನ್ನು ತೊರೆದರು ಆದರೆ ಸಿಖ್ ಸಮುದಾಯ ಮಾತ್ರ ಕಾಶ್ಮೀರ ತೊರೆಯಲಿಲ್ಲ, ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ, ಏನೇ ಬಂದರು ನಾವು ನಿಮ್ಮ ಜೊತೆಗಿರುತ್ತೇವೆ ಎಂದು ವಿಶ್ವಾಸ ಮಾತುಗಳನ್ನಾಡಿದ್ದಾರೆ.
ಇದಾದ ಕೆಲವೇ ದಿನಗಳಲ್ಲಿ ಭಾರತದಲ್ಲಿ ಉಸಿರುಗಟ್ಟಿಸುವಂತಹ ವಾತಾವರವಿದೆ ಎಂದು ಹೇಳಿಕೆ ನೀಡಿದ್ದು, ಈ ಹೇಳಿಕೆ ಕುರಿತು ಆರ್ಎಸ್ಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications