ಚೀನಾದಿಂದ ಆಮದು ಸ್ಥಗಿತ: ಎಲ್ಇಡಿ ದೀಪಗಳ ಬೆಲೆ ಗಗನಕ್ಕೆ
ನವದೆಹಲಿ, ಏಪ್ರಿಲ್ 3: ಕೊರೊನಾ ಹಾವಳಿಯಿಂದ ಇಡೀ ಜಗತ್ತೇ ತತ್ತರಿಸುತ್ತಿದೆ. ಇದರಿಂದ ವ್ಯಾಪಾರೋದ್ಯಮದ ಮೇಲೆ ಕರಿನೆರಳು ಚೆಲ್ಲಿದೆ. ಅವಶ್ಯಕ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ.
ಕಳೆದ ನಾಲ್ಕು ತಿಂಗಳಿನಿಂದ ಚೀನಾದಲ್ಲಿ ಕೊರೊನಾ ಹಾವಳಿ ಇದ್ದಿದ್ದರಿಂದ ಭಾರತದಲ್ಲಿ ಎಲ್ಇಡಿ ವಿದ್ಯುತ್ ದೀಪಗಳ ಬೆಲೆ ಹೆಚ್ಚಳ ಕಾಣುತ್ತಿದೆ.
ಈ ಕುರಿತು ಆತಂಕ ವ್ಯಕ್ತಪಡಿಸಿರುವ ಭಾರತದ ಇಲೆಕ್ಟ್ರಿಕಲ್ ದೀಪದ ಉತ್ಪಾದಕ ಸಂಘಟನೆ (Electric Lamp and Component Manufacturers Association (ELCOMA), ಚೀನದಿಂದ ಎಲ್ಇಡಿ ದೀಪಗಳು ಹಾಗೂ ಎಲ್ಇಡಿಗೆ ಬಳಸಬಹುದಾದ ಬಿಡಿಬಾಗಳ ಪೂರೈಕೆ ನಿಂತಿರುವುದರಿಂದ ಭಾರತದಲ್ಲಿ ಎಲ್ಇಡಿ ಬಲ್ಬ್ಗಳ ಬೆಲೆಯಲ್ಲಿ ಶೇ 30 ರಷ್ಟು ಹೆಚ್ಚಳವಾಗಿದೆ ಎಂದು ಹೇಳಿದೆ.

ಮಾರಾಟ ಕ್ಷೇತ್ರದ ಮೇಲೆ ತೀವ್ರ ಹೊಡೆತ
ಅಲ್ಲದೇ ಭಾರತದ ಆಂತರಿಕ ಇಲೆಕ್ಟ್ರಾನಿಕ್ ಕ್ಷೇತ್ರದ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ. ಇದರಿಂದ ಮೊಬೈಲ್ ತಯಾರಿಕೆ ಹಾಗೂ ಮಾರಾಟ ಕ್ಷೇತ್ರದ ಮೇಲೆ ತೀವ್ರ ಹೊಡೆತ ಬಿದ್ದಿದೆ ಎಂದು ಸಂಘಟನೆಯ ಉಪಾಧ್ಯಕ್ಷ ಪದ್ಮಾಕರ ಜೋಶಿ ತಿಳಿಸಿದ್ದಾರೆ.

ಚೀನಾದಿಂದ ಪೂರೈಕೆ ಸಂಪೂರ್ಣ ಸ್ಥಗಿತ
ಈಗ ಕೊರೊನಾ ಜಗತ್ತಿನಾದ್ಯಂತ ವಿಸ್ತರಿಸುವುದರಿಂದ ರಪ್ತು ವಹಿವಾಟು ಸಹ ಸ್ಥಗಿತಗೊಂಡಿದೆ. ಹಾಗಾಗಿ ಇಲೆಕ್ಟ್ರಾನಿಕ್ ಉಪಕರಣಗಳು ಇನ್ನೇನು ಭಾರೀ ಪ್ರಮಾಣದಲ್ಲಿ ಏರಿಕೆ ಕಾಣಲಿವೆ. ಇದಕ್ಕೆ ಮುಖ್ಯ ಕಾರಣವೇ ಚೀನಾ. ಚೀನಾದಿಂದ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವುದು ಈ ಎಲ್ಲ ಬೆಳವಣಿಗೆಗಳಿಗೆ ಕಾರಣ ಎಂದು ಹೇಳಿದ್ದಾರೆ.

ಶೇ 30 ಚೀನಾ ಒಂದರಿಂದಲೇ ಭಾರತಕ್ಕೆ
ಭಾರತದಲ್ಲಿ ಆಂತರಿಕವಾಗಿ ಶೇ 60 ರಷ್ಟನ್ನು ಮಾತ್ರ ಇಲೆಕ್ಟ್ರಾನಿಕ್ ಉಪಕರಣಗಳು ಉತ್ಪಾದನೆಯಾಗುತ್ತವೆ. ಶೇ 30 ರಷ್ಟು ಚೀನಾ ಒಂದರಿಂದಲೇ ಭಾರತಕ್ಕೆ ಬರುತ್ತವೆ. ಉಳಿದದ್ದು ಜಪಾನ್, ಕೊರಿಯಾ, ತೈವಾನ್ ದೇಶಗಳಿಂದ ಬರುತ್ತೆ. ಈಗ ಎಲ್ಲ ದೇಶಗಳ ಬಾಗಿಲು ಬಂದ್ ಆಗಿರವುದರಿಂದ ಇಲೆಕ್ಟ್ರಾನಿಕ್ ಉಪಕರಣ ಉತ್ಪಾದನೆ ಹಾಗೂ ಮಾರಾಟದ ಮೇಲೆ ತೀವ್ರ ಹೊಡೆತ ಬಿಳ್ಳಲಿದೆ ಎಂದು ಜೋಶಿ ಹೇಳಿದ್ದಾರೆ.

ಎಲ್ಇಡಿ ಬಿಟ್ಟು ದೀಪ ಹಚ್ಚಲು ಹೇಳಿದ ಮೋದಿ
ಲಾಕ್ಡೌನ್ ಪರಿಸ್ಥಿತಿಯಲ್ಲಿ ದೇಶದ ಜನರ ಮನೋಬಲವನ್ನು ಹೆಚ್ಚಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಶುಕ್ರವಾರ ಬೆಳಿಗ್ಗ ದೇಶದ ಜನರ ಮುಂದೆ ಮಾತನಾಡಿರುವ ಮೋದಿ ಅವರು, ಬರುವ ಭಾನುವಾರ ಅಂದರೆ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಪ್ರತಿಯೊಬ್ಬರೂ ತಮ್ಮ ಮನೆಯ ವಿದ್ಯುತ್ ದೀಪ ಆರಿಸಿ ಮೊಂಬತ್ತಿ, ದೀಪ ಅಥವಾ ಮೊಬೈಲ್ ಟಾರ್ಚ್ನ್ನು ಹಚ್ಚಬೇಕು ಎಂದು ಕರೆ ಕೊಟ್ಟಿದ್ದಾರೆ. ಮೋದಿ ಹೀಗೆ ಹೇಳಿರುವುದರಲ್ಲಿ ಜನರ ಮನೋಬಲ ಹೆಚ್ಚಿಸುವ ಉದ್ದೇಶ ಇದೆ ಎಂದು ಮನಶಾಸ್ತ್ರೀಯ ವಿಶ್ಲೇಷಣೆ ನಡೆಯುತ್ತಿದೆ. ಕೆಲ ಟೀಕೆಗಳೂ ಕೂಡ ಕೇಳಿ ಬಂದಿವೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications