ಜೆಎನ್ ಯುನಲ್ಲಿ ನಾಲ್ಕೂ ಪ್ರಮುಖ ಹುದ್ದೆಗಳು ಎಡಪಂಥೀಯ ವಿದ್ಯಾರ್ಥಿ ಒಕ್ಕೂಟಕ್ಕೆ
ನವದೆಹಲಿ, ಸೆಪ್ಟೆಂಬರ್ 16: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್ಎಸ್ ಯುಎಸ್ ಯು) ಚುನಾವಣೆಯಲ್ಲಿ ಎಡರಂಗವು ಎಲ್ಲ ನಾಲ್ಕು ಪ್ರಮುಖ ಹುದ್ದೆಗಳನ್ನು ಜಯಗಳಿಸಿದೆ. ಶನಿವಾರ ಸಂಜೆ ಮತ ಎಣಿಕೆ ಮತ್ತೆ ಆರಂಭವಾಗಿತ್ತು. ಅದಕ್ಕೂ ಮುನ್ನ ಹದಿನಾಲ್ಕು ಗಂಟೆಗಳ ಕಾಲ ಎಣಿಕೆ ನಿಲ್ಲಿಸಲಾಗಿತ್ತು.
ಮಾಹಿತಿ ನೀಡದೆ ಮತ ಎಣಿಕೆ ಆರಂಭಿಸಲಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಆರೋಪ ಮಾಡಿದ್ದರಿಂದ ಎಣಿಕೆ ನಿಲ್ಲಿಸಲಾಗಿತ್ತು. ಎಡ ಗುಂಪಿನ ಎನ್.ಸಾಯಿ ಬಾಲಾಜಿ ಅಧ್ಯಕ್ಷ, ಸಾರಿಕಾ ಚೌಧರಿ ಉಪಾಧ್ಯಕ್ಷೆ, ಎಜಾಜ್ ಅಹ್ಮದ್ ರಥೇರ್ ಪ್ರಧಾನ ಕಾರ್ಯದರ್ಶಿ ಮತ್ತು ಅಮೃತಾ ಜಯದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ ಎ), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ ಎಫ್ ಐ), ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಷನ್ ಮತ್ತು ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ ಎಫ್) ಇವೆಲ್ಲವೂ ಎಡಪಂಥೀಯ ವಿದ್ಯಾರ್ಥಿ ಒಕ್ಕೂಟದ ಭಾಗವಾಗಿವೆ.

ಎನ್.ಸಾಯಿ ಬಾಲಾಜಿ 2161, ಸಾರಿಕಾ ಚೌಧರಿ 2,692, ಎಜಾಜ್ ಅಹ್ಮದ್ ರಥೇರ್ 2423 ಮತ್ತು ಅಮೃತಾ ಜಯದೀಪ್ 2047 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಶುಕ್ರವಾರ ಶೇ 67.8ರಷ್ಟು ಮತದಾನವಾಗಿತ್ತು. ಕಳೆದ ಆರು ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಮತದಾನ ಇದಾಗಿದೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ ಹಾಕಿದ್ದರು.
ಎಡಪಂಥೀಯ ಗುಂಪುಗಳಲ್ಲದೆ ಎಬಿವಿಪಿ, ಎನ್ ಎಸ್ ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ) ಮತ್ತು ಬಿಎಪಿಎಸ್ ಎ ಕೂಡ ಚುನಾವಣೆಯಲ್ಲಿ ಭಾಗಿಯಾಗಿದ್ದವು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications