ಜೆಎನ್ ಯುನಲ್ಲಿ ನಾಲ್ಕೂ ಪ್ರಮುಖ ಹುದ್ದೆಗಳು ಎಡಪಂಥೀಯ ವಿದ್ಯಾರ್ಥಿ ಒಕ್ಕೂಟಕ್ಕೆ
ನವದೆಹಲಿ, ಸೆಪ್ಟೆಂಬರ್ 16: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್ಎಸ್ ಯುಎಸ್ ಯು) ಚುನಾವಣೆಯಲ್ಲಿ ಎಡರಂಗವು ಎಲ್ಲ ನಾಲ್ಕು ಪ್ರಮುಖ ಹುದ್ದೆಗಳನ್ನು ಜಯಗಳಿಸಿದೆ. ಶನಿವಾರ ಸಂಜೆ ಮತ ಎಣಿಕೆ ಮತ್ತೆ ಆರಂಭವಾಗಿತ್ತು. ಅದಕ್ಕೂ ಮುನ್ನ ಹದಿನಾಲ್ಕು ಗಂಟೆಗಳ ಕಾಲ ಎಣಿಕೆ ನಿಲ್ಲಿಸಲಾಗಿತ್ತು.
ಮಾಹಿತಿ ನೀಡದೆ ಮತ ಎಣಿಕೆ ಆರಂಭಿಸಲಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಆರೋಪ ಮಾಡಿದ್ದರಿಂದ ಎಣಿಕೆ ನಿಲ್ಲಿಸಲಾಗಿತ್ತು. ಎಡ ಗುಂಪಿನ ಎನ್.ಸಾಯಿ ಬಾಲಾಜಿ ಅಧ್ಯಕ್ಷ, ಸಾರಿಕಾ ಚೌಧರಿ ಉಪಾಧ್ಯಕ್ಷೆ, ಎಜಾಜ್ ಅಹ್ಮದ್ ರಥೇರ್ ಪ್ರಧಾನ ಕಾರ್ಯದರ್ಶಿ ಮತ್ತು ಅಮೃತಾ ಜಯದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ ಎ), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ ಎಫ್ ಐ), ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಷನ್ ಮತ್ತು ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ ಎಫ್) ಇವೆಲ್ಲವೂ ಎಡಪಂಥೀಯ ವಿದ್ಯಾರ್ಥಿ ಒಕ್ಕೂಟದ ಭಾಗವಾಗಿವೆ.

ಎನ್.ಸಾಯಿ ಬಾಲಾಜಿ 2161, ಸಾರಿಕಾ ಚೌಧರಿ 2,692, ಎಜಾಜ್ ಅಹ್ಮದ್ ರಥೇರ್ 2423 ಮತ್ತು ಅಮೃತಾ ಜಯದೀಪ್ 2047 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಶುಕ್ರವಾರ ಶೇ 67.8ರಷ್ಟು ಮತದಾನವಾಗಿತ್ತು. ಕಳೆದ ಆರು ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಮತದಾನ ಇದಾಗಿದೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ ಹಾಕಿದ್ದರು.
ಎಡಪಂಥೀಯ ಗುಂಪುಗಳಲ್ಲದೆ ಎಬಿವಿಪಿ, ಎನ್ ಎಸ್ ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ) ಮತ್ತು ಬಿಎಪಿಎಸ್ ಎ ಕೂಡ ಚುನಾವಣೆಯಲ್ಲಿ ಭಾಗಿಯಾಗಿದ್ದವು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications