ಜೆಎನ್ ಯುನಲ್ಲಿ ನಾಲ್ಕೂ ಪ್ರಮುಖ ಹುದ್ದೆಗಳು ಎಡಪಂಥೀಯ ವಿದ್ಯಾರ್ಥಿ ಒಕ್ಕೂಟಕ್ಕೆ
ನವದೆಹಲಿ, ಸೆಪ್ಟೆಂಬರ್ 16: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್ಎಸ್ ಯುಎಸ್ ಯು) ಚುನಾವಣೆಯಲ್ಲಿ ಎಡರಂಗವು ಎಲ್ಲ ನಾಲ್ಕು ಪ್ರಮುಖ ಹುದ್ದೆಗಳನ್ನು ಜಯಗಳಿಸಿದೆ. ಶನಿವಾರ ಸಂಜೆ ಮತ ಎಣಿಕೆ ಮತ್ತೆ ಆರಂಭವಾಗಿತ್ತು. ಅದಕ್ಕೂ ಮುನ್ನ ಹದಿನಾಲ್ಕು ಗಂಟೆಗಳ ಕಾಲ ಎಣಿಕೆ ನಿಲ್ಲಿಸಲಾಗಿತ್ತು.
ಮಾಹಿತಿ ನೀಡದೆ ಮತ ಎಣಿಕೆ ಆರಂಭಿಸಲಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಆರೋಪ ಮಾಡಿದ್ದರಿಂದ ಎಣಿಕೆ ನಿಲ್ಲಿಸಲಾಗಿತ್ತು. ಎಡ ಗುಂಪಿನ ಎನ್.ಸಾಯಿ ಬಾಲಾಜಿ ಅಧ್ಯಕ್ಷ, ಸಾರಿಕಾ ಚೌಧರಿ ಉಪಾಧ್ಯಕ್ಷೆ, ಎಜಾಜ್ ಅಹ್ಮದ್ ರಥೇರ್ ಪ್ರಧಾನ ಕಾರ್ಯದರ್ಶಿ ಮತ್ತು ಅಮೃತಾ ಜಯದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ ಎ), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ ಎಫ್ ಐ), ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಷನ್ ಮತ್ತು ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ ಎಫ್) ಇವೆಲ್ಲವೂ ಎಡಪಂಥೀಯ ವಿದ್ಯಾರ್ಥಿ ಒಕ್ಕೂಟದ ಭಾಗವಾಗಿವೆ.

ಎನ್.ಸಾಯಿ ಬಾಲಾಜಿ 2161, ಸಾರಿಕಾ ಚೌಧರಿ 2,692, ಎಜಾಜ್ ಅಹ್ಮದ್ ರಥೇರ್ 2423 ಮತ್ತು ಅಮೃತಾ ಜಯದೀಪ್ 2047 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಶುಕ್ರವಾರ ಶೇ 67.8ರಷ್ಟು ಮತದಾನವಾಗಿತ್ತು. ಕಳೆದ ಆರು ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಮತದಾನ ಇದಾಗಿದೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ ಹಾಕಿದ್ದರು.
ಎಡಪಂಥೀಯ ಗುಂಪುಗಳಲ್ಲದೆ ಎಬಿವಿಪಿ, ಎನ್ ಎಸ್ ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ) ಮತ್ತು ಬಿಎಪಿಎಸ್ ಎ ಕೂಡ ಚುನಾವಣೆಯಲ್ಲಿ ಭಾಗಿಯಾಗಿದ್ದವು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications