ನಿರ್ಭಯ ಪ್ರಕರಣ; ಗಲ್ಲು ತಪ್ಪಿಸಿಕೊಳ್ಳಲು ನಡುರಾತ್ರಿ ಹೈಡ್ರಾಮ
ನವದೆಹಲಿ, ಮಾರ್ಚ್ 20 : ಗಲ್ಲು ಕುಣಿಕೆ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ನಡುರಾತ್ರಿ ಹೈಡ್ರಾಮ ಮಾಡಿದರು. ಅಂತಿಮವಾಗಿ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು.
Recommended Video
ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ರಾತ್ರಿ 11.20ಕ್ಕೆ ವಜಾಗೊಳಿಸಿತು. ಬಳಿಕ ಅಪರಾಧಿಗಳ ಪರ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋದರು.
ನಡುರಾತ್ರಿ 1 ಗಂಟೆ ಸುಮಾರಿಗೆ ಅರ್ಜಿಯ ವಿಚಾರಣೆಯನ್ನು ಆರ್. ಭಾನುಮತಿ ನೇತೃತ್ವದ ಪೀಠ ಕೈಗೆತ್ತಿಕೊಂಡಿತು. 3.30ರ ಸುಮಾರಿಗೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು. 5.30ಕ್ಕೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಯಿತು.

ನಿರ್ಭಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ಅಪರಾಧಿಗಳು. ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಅಪರಾಧಿಗಳ ಪರ ವಕೀಲರು ನಡುರಾತ್ರಿ ಹೈಡ್ರಾಮ ನಡೆಸಿದರು.
ತಾನು ಬಾಲಾಪರಾಧಿ ಎಂದು, ರಾಷ್ಟ್ರಪತಿಗಳು ತನ್ನ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದ್ದಕ್ಕೆ ನಿಖರ ಕಾರಣ ನೀಡಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಯಿತು. ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಮನವಿ ಮಾಡಲಾಯಿತು.
ಆರ್. ಭಾನುಮತಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ರಾಷ್ಟ್ರಪತಿಗಳ ತೀರ್ಮಾನವನ್ನು ಪುನರ್ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿತು. ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡುವುದಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿತು.
2012ರ ಡಿಸೆಂಬರ್ 16ರಂದು 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಚಲಿಸುವ ಬಸ್ನಲ್ಲಿ ಅತ್ಯಾಚಾರ ನಡೆಸಿ, ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಲಾಗಿತ್ತು. ಡಿಸೆಂಬರ್ 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಳು.
ಪ್ರಕರಣದ ನಡೆದು ಏಳು ವರ್ಷಗಳ ಬಳಿಕ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಒಟ್ಟು 6 ಅಪರಾಧಿಗಳು. ಆದರೆ, ಬಾಲಾಪರಾಧಿ ಎಂಬ ಕಾರಣಕ್ಕೆ ಒಬ್ಬ ಬಿಡುಗಡೆಗೊಂಡಿದ್ದಾನೆ. ಮತ್ತೊಬ್ಬ ಆರೋಪಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications