ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿ: ಮೋದಿ ಮನವಿ
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುವಂತೆ ಪ್ರಧಾನಿ ಮೋದಿ ಅವರು ಭಾನುವಾರ ಮನವಿ ಮಾಡಿದರು.
ಬೆಂಗಳೂರು, ನವೆಂಬರ್, 27: ನೋಟು ನಿಷೇಧದ ಬಳಿಕ ಇದೇ ಪ್ರಥಮ ಬಾರಿಗೆ ಮನ್ -ಕಿ - ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾನುವಾರ ಮಾತನಾಡಿದರು.
"ನಗದು ರಹಿತ ವ್ಯವಹಾರಕ್ಕೆ ಯುವ ಸಮೂಹ ಹೆಚ್ಚು ಒತ್ತು ನೀಡಬೇಕು, ನಗದು ರಹಿತ ವ್ಯವಾಹಾರ ಮಾಡುವುದು ವ್ಯಾಟ್ಸಪ್ ಬಳಕೆಗಿಂತ ಸುಲಭ ನಗು ರಹಿತ ಸಮಾಜ ನಿರ್ಮಿಸುವುದು ಯುವ ಜನಾಂಗದ ಕೈಯಲ್ಲೇ ಇದೆ" ಎಂದು ಅವರು ತಿಳಿಸಿದರು.

"ರೂ.500 ಹಾಗು ರೂ.1000 ಮುಖಬೆಲೆಯ ನೋಟುಗಳ ನಿಷೇಧದಿಂದ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನು ಈಗಲೂ ಹೇಳುತ್ತೇನೆ ಸ್ವಲ್ಪ ತಾಳ್ಮೆಯಿಂದ ಇರಿ ಇನ್ನು 50 ದಿನದಲ್ಲಿ ಎಲ್ಲವೂ ಸರಿಹೋಗುತ್ತದೆ" ಎಂದು ಹೇಳಿದರು.
ಕರ್ನಾಟಕದಿಂದ ಕರೆ ಮಾಡಿದ್ದ ಯಲ್ಲಪ್ಪ ವೆಲಂಕರ್ ಮತ್ತು ಮಧ್ಯಪ್ರದೇಶದಿಂದ ಕರೆ ಮಾಡಿದ್ದ ಆಶಿಷ್ ಪರೆ ಅವರ ಕರೆಗಳನ್ನು ಸ್ವೀಕರಿಸಿ ಅವರು ಪ್ರತಿಕ್ರಿಯೆ ನೀಡಿದರು. ಅಷ್ಟೇ ಅಲ್ಲದೆ ನೋಟು ನಿಷೇಧ ಕುರಿತು ಸಾರ್ವಜನಿಕರಿಂದ ಬಂದ ಪ್ರತಿಕ್ರಿಯೆಗಳನ್ನೂ ಸಹ ಅವರು ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದರು.
ಭಾಷಣದ ಪ್ರಮುಖಾಂಶಗಳು
* ಕಳೆದ ತಿಂಗಳು ನಾವೆಲ್ಲರೂ ವಿಶೇಷವಾಗಿ ಯೋಧರಿಗೆ ಶುಭಾಷಯ ತಿಳಿಸುವ ಮೂಲಕ ದೀಪಾವಳಿ ಆಚರಿಸಿದ್ದೇವೆ. ನಾನು ಸಹ ನಮ್ಮ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದೇನೆ.
* ಎಲ್ಲರಂತೆ ನಮಗೂ ದೀಪಾವಳಿ ಪವಿತ್ರ ಹಬ್ಬ, ದೇಶದ ರಕ್ಷಣೆ ಮಾಡುವ ಮೂಲಕ ನಾವು ದೀಪಾವಳಿ ಆಚರಿಸಿದ್ದೇವೆ" ಯೋದರೊಬ್ಬರು ನನಗೆ ಪತ್ರ ಬರೆದಿದ್ದರು.
* ಜಮ್ಮು ಕಾಶ್ಮೀರದ ಕೆಲವು ಗ್ರಾಮಗಳಿಗೆ ಭೇಟಿ ನೀಡಿದ್ದೆ, ಅದು ನನಗೆ ತುಂಬಾ ಸಂತಸದ ವಿಷಯ, ನಿಮ್ಮ ಭವಿಷ್ಯದ ಅಭಿವೃದ್ಧಿ ಕುರಿತು ಹೆಚ್ಚು ಯೋಚನೆ ಮಾಡಿ ಎಂದು ನಾನು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದೆ.
* ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಉನ್ನತ ವಿದ್ಯೆ ಪಡೆದು ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವತ್ತ ಮನಸ್ಸು ಮಾಡಬೇಕು.
* ಅಕ್ರಮವಾಗಿ ಕೂಡಿಟ್ಟ ಹಣವನ್ನು ಸಕ್ರಮ ಮಾಡಿಕೊಳ್ಳಲು ಬಡವರ ಖಾತೆಗೆ ಜಮೆ ಮಾಡಬೇಡಿ* ಬ್ಯಾಂಕ್ ಮತ್ತು ಅಂಚೆ ಕಚೇರಿ ಸಿಬ್ಬಂದಿ ಹೆಚ್ಚು ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದಾರೆ.
* ಇತ್ತೀಚೆಗೆ ಸೂರತ್ ನ ಭರತ್ ಮಧು ಮತ್ತು ದಕ್ಷ ಪರ್ಮರ್ ಅವರು 'ಚಾಯ್ ಪೆ ಚರ್ಚಾ' ರೀತಿ ಕೇವಲ ಟೀ ಮತ್ತು ನೀರು ಕೊಟ್ಟು ಅತಿಥಿಗಳನ್ನು ಉಪಚರಿಸಿ ಮದುವೆ ಮಾಡಿಕೊಂಡಿರುವುದು ನನ್ನ ಗಮನಕ್ಕೆ ಬಂದಿದೆ.
* ಕೂಲಿ ಕಾರ್ಮಿಕರು ಸಹ ಬ್ಯಾಂಕ್ ಖಾತೆ ತೆರೆಯಬೇಕು. ಸಂಬಳವನ್ನು ಖಾತೆ ಮೂಲಕ ಪಡೆಯುವುದರಿಂದ ಅವರಿಗೆ ಕನಿಷ್ಠ ಕೂಲಿ ದೊರೆಯುತ್ತದೆ.
* ನಗದು ರಹಿತ ಸಮಾಜ ನಿರ್ಮಿಸುವುದು ನಮ್ಮ ಹೆಬ್ಬಯಕೆ, ಅತು ತಕ್ಷಣ ಆಗುವಂಥದ್ದಲ್ಲ. ಇಂದಿನಿಂದಲೇ ಈ ನಿಟ್ಟಿನಲ್ಲಿ ಶ್ರಮಿಸೋಣ ಹಿರಿಯರಿಗೂ ತಂತ್ರಜ್ಞಾನದ ಕುರಿತು ತಿಳಿವಳಿಕೆ ಹೇಳೋಣ.
* ಪ್ರತಿ ಬ್ಯಾಂಕ್ ನಲ್ಲೂ ಆನ್ ಲೈನ್ ವ್ಯವಹಾರ ನಡೆಯುತ್ತಿದೆ. ಮೊಬೈಲ್ ತಂತ್ರಂಶಾಗಳಿವೆ, ಇ-ವಾಲೆಟ್ಸ್ ಗಳಿವೆ ನಗದು ರಹಿತ ವ್ಯವಹಾರಕ್ಕಾಗಿ ಇವುಗಳನ್ನು ಬಳಸಿಕೊಳ್ಳಿ
* ಇದು ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟ. ಹೋರಾಟಕ್ಕೆ ಜನರು ಸಹಕಾರ ನೀಡುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications